Advertisement

ಭಯೋತ್ಪಾದಕ ಮುಖಂಡರ ಜತೆ ಐಎಸ್ ಐ ರಹಸ್ಯ ಸಭೆ: ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಚು

04:36 PM Oct 15, 2021 | Team Udayavani |

ಇಸ್ಲಾಮಾಬಾದ್: ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ಇತ್ತೀಚೆಗಷ್ಟೇ ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ಹಲವಾರು ಭಯೋತ್ಪಾದಕ ಸಂಘಟನೆಗಳ ಮುಖಂಡರ ಜತೆ ರಹಸ್ಯ ಮಾತುಕತೆ ನಡೆಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

Advertisement

ಇದನ್ನೂ ಓದಿ:ಅಫ್ಘಾನ್: ಕಂದಾಹಾರ್ ಮಸೀದಿಯೊಳಗೆ ಬಾಂಬ್ ಸ್ಫೋಟ, ನೂರಾರು ಮಂದಿ ಸಾವು?

ಐಎಸ್ ಐ ಅಧಿಕಾರಿಗಳು ಮತ್ತು ಭಯೋತ್ಪಾದಕ ಸಂಘಟನೆ ನಡುವೆ ನಡೆದ ರಹಸ್ಯ ಮಾತುಕತೆ ಬಗ್ಗೆ ಭಾರತದ ಗುಪ್ತಚರ ಇಲಾಖೆಗೆ ತಿಳಿದಿದ್ದು, ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿತ್ತು ಎಂದು ವರದಿ ವಿವರಿಸಿದೆ.

ಗುಪ್ತಚರ ಇಲಾಖೆಯ ಸಂದೇಶದಲ್ಲಿ, ಜಮ್ಮು-ಕಾಶ್ಮೀರದಲ್ಲಿ ಬೃಹತ್ ಪ್ರಮಾಣದ ದಾಳಿ ನಡೆಸಲು ಐಎಸ್ ಐ ಸಿದ್ಧತೆ ನಡೆಸುತ್ತಿದೆ. ಈ ದಾಳಿಯಲ್ಲಿ ಕಾಶ್ಮೀರದಲ್ಲಿ ಹೆಚ್ಚಿನ ಪ್ರಮಾಣದ ಸಾವು ಸಂಭವಿಸಬೇಕೆಂದು ರಹಸ್ಯ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಹೇಳಿದೆ.

ಪೊಲೀಸರ ಜತೆ ಕಾರ್ಯನಿರ್ವಹಿಸುವ ಕಾಶ್ಮೀರಿಗಳು, ಭದ್ರತಾ ಪಡೆ, ಕಾಶ್ಮೀರಿ ಪಂಡಿತರು ಹಾಗೂ ಗುಪ್ತಚರ ಇಲಾಖೆಯ ಜನರನ್ನೂ ಕೊಲ್ಲಬೇಕೆಂದು ಸಭೆಯಲ್ಲಿ ಚರ್ಚಿಸಲಾಗಿತ್ತು. ಅಷ್ಟೇ ಅಲ್ಲ ಬಿಜೆಪಿ , ಆರ್ ಎಸ್ ಎಸ್ ಜನರನ್ನು ಗುರಿಯಾಗಿರಿಸಿ ದಾಳಿ ನಡೆಸಬೇಕೆಂದು ರಹಸ್ಯ ಸಭೆಯಲ್ಲಿ ಚರ್ಚಿಸಲಾಗಿತ್ತು ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next