Advertisement

ಪಾಕ್‌ ಅಪ್ರಚೋದಿತ ದಾಳಿ: ಮಹಿಳೆಗೆ ಗಾಯ

03:45 AM Jul 01, 2017 | Team Udayavani |

ಜಮ್ಮು/ಇಸ್ಲಾಮಾಬಾದ್‌: ಪಾಕಿಸ್ತಾನವು ಗಡಿ ಕ್ಯಾತೆಯನ್ನು ಮುಂದುವರಿಸಿದ್ದು, ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಕದನ ವಿರಾಮ ಉಲ್ಲಂಘೀಸಿದೆ.

Advertisement

 ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್‌ ಪಡೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಜತೆಗೆ, ನೀರಿನ ಟ್ಯಾಂಕ್‌ವೊಂದಕ್ಕೆ ಹಾನಿಯಾಗಿದೆ. ಪಾಕ್‌ನ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ಮಾಹಿತಿ ನೀಡಿದ್ದಾರೆ. 

ಇದೇ ವೇಳೆ, ಶುಕ್ರವಾರ ಪಾಕ್‌ ಪ್ರಧಾನಿ ನವಾಜ್‌ ಷರೀಫ್ ಅವರು ಅಲ್ಲಿನ ವಿದೇಶಾಂಗ ಸಚಿವಾಲಯಕ್ಕೆ ಭೇಟಿ ನೀಡಿ ತುರ್ತು ಸಭೆ ನಡೆಸಿದ್ದಾರೆ. ಗಡಿಯಲ್ಲಿ ಶಾಂತಿ ಕಾಪಾಡುವ ಕುರಿತು ಮತ್ತು ನೆರೆರಾಷ್ಟ್ರಗಳೊಂದಿಗೆ ಮಾತುಕತೆ ಮೂಲಕ ವಿವಾದ ಪರಿಹರಿಸಿಕೊಳ್ಳುವ ಕುರಿತು ಅವರು ಈ ವೇಳೆ ಚರ್ಚಿಸಿದ್ದಾರೆ. ಇದೇ ಸಂದರ್ಭದಲ್ಲಿ, ಇತ್ತೀಚೆಗೆ ಅಮೆರಿಕ-ಭಾರತ ಜಂಟಿ ಪತ್ರಿಕಾ ಹೇಳಿಕೆ ವೇಳೆ ಕಾಶ್ಮೀರದಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಮೌನ ವಹಿಸಿದ್ದನ್ನೂ ಅವರು ಖಂಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next