Advertisement

ರಾಮ ಮಂದಿರ ಮೇಲೆ ದಾಳಿಗೆ ಸಂಚು

10:12 PM Jan 10, 2023 | Team Udayavani |

ನವದೆಹಲಿ: ಉದ್ಘಾಟನೆಗೂ ಮುನ್ನ ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮಜನ್ಮ ಭೂಮಿ ದೇಗುಲದ ಮೇಲೆ ದೊಡ್ಡ ಮಟ್ಟದ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂಬ ಆಘಾತಕಾರಿ ಅಂಶ ಉನ್ನತ ಗುಪ್ತಚರ ಮೂಲಗಳಿಂದ ತಿಳಿದುಬಂದಿದೆ.

Advertisement

ಪಾಕ್‌ ಮೂಲದ ಉಗ್ರ ಸಂಘಟನೆಗಳಾದ ಜೈಶ್‌-ಎ-ಮೊಹಮ್ಮದ್‌, ಲಷ್ಕರ್‌-ಎ-ತೊಯ್ಬಾ ಅದಕ್ಕಾಗಿ ಸಿದ್ಧತೆ ನಡೆಸಿದೆ ಎಂದು ಗೊತ್ತಾಗಿದೆ.

2024ರಲ್ಲಿ ದೇಗುಲ ಉದ್ಘಾಟನೆಗೂ ಮುನ್ನ ನೇಪಾಳದ ಮೂಲಕ ಆತ್ಮಹತ್ಯೆ ಬಾಂಬರ್‌ಗಳು ಮತ್ತು ಸ್ಫೋಟಕಗಳನ್ನು ರವಾನಿಸಿ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಜತೆಗೆ ಈ ಮೂಲಕ ಹಿಂದೂ-ಮುಸ್ಲಿಮರ ನಡುವೆ ಕೋಮು ಹಿಂಸಾಚಾರ ಉಂಟು ಮಾಡಲು ಉಗ್ರ ಸಂಘಟನೆಗಳು ಹವಣಿಸುತ್ತಿವೆ ಎಂದು ವರದಿಗಳು ತಿಳಿಸಿವೆ.

ಇನ್ನೊಂದೆಡೆ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್‌ ಸ್ಟೇಟ್‌ ಇಂಟಲಿಜೆನ್ಸ್‌(ಐಎಸ್‌ಐ) ಬೆಂಬಲಿತ ಒಳನುಸುಳುಕೋರರ ಪ್ರಯತ್ನವನ್ನು ಭಾರತೀಯ ಪಡೆಗಳು ಯಶಸ್ವಿಯಾಗಿ ನಿಗ್ರಹಿಸುತ್ತಾ ಬಂದಿವೆ. ಜತೆಗೆ ಅಕ್ರಮ ಶಸ್ತ್ರಾಸ್ತ್ರ ಮತ್ತು ಮಾದಕ ವಸ್ತುಗಳ ಸಾಗಾಟದ ಮೇಲೆ ನಿಯಂತ್ರಣ ಸಾಧಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next