Advertisement

ಪಳವಳ್ಳಿ ಕಟ್ಟೆ ಬಸ್ ಅಪಘಾತ ಪ್ರಕರಣ:  ಸಾವಿನ ಸಂಖ್ಯೆ 7ಕ್ಕೆ ಏರಿಕೆ

11:11 AM Mar 26, 2022 | |

ಪಾವಗಡ: ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಮಾ. 19 ರಂದು ನಡೆದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶನಿವಾರ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Advertisement

ಬುಡ್ಡಾರೆಡ್ಡಿಹಳ್ಳಿಯ ಮಹೇಂದ್ರ ಕುಮಾರ್ (18) ಮೃತಪಟ್ಟ ವಿದ್ಯಾರ್ಥಿ.

ಅಪಘಾತದಲ್ಲಿ ಮಹೇಂದ್ರ ಕುಮಾರ್ ಅವರ ತಲೆ ಹಾಗೂ ಬೆನ್ನು ಮೂಳೆಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಮಹೇಂದ್ರ ಅವರ ಚಿಕಿತ್ಸೆಗೆ ಸುಮಾರು 10 ರಿಂದ 15 ಲಕ್ಷ ರೂ ವೆಚ್ಚವಾಗುತ್ತದೆ ಎಂದು ಖಾಸಗಿ ಆಸ್ಪತ್ರೆಯಲ್ಲಿ ತಿಳಿಸಲಾಗಿತ್ತು. ಅದಕ್ಕಾಗಿ ಖಾಸಗಿ ಆಸ್ಪತ್ರೆಯಿಂದ ಮತ್ತೆ ವಿಕ್ಟೋರಿಯಾ ಆಸ್ಪತ್ರೆಗೆ ಮಹೇಂದ್ರ ಅವರನ್ನು ದಾಖಲಿಸಲಾಗಿತ್ತು.

ಇದನ್ನೂ ಓದಿ:ಕೊಲೆ ಪ್ರಕರಣದ ಆರೋಪಿ ಜೈಲಲ್ಲಿದ್ದೇ ಐಐಟಿ Rank ಪಡೆದ..ವಿಜ್ಞಾನಿಯಾಗುವ ಕನಸು ಈತನದ್ದು!

ತಾಲ್ಲೂಕಿನ ಸಂಘ ಸಂಸ್ಥೆಗಳು, ಮಹೇಂದ್ರ ಶಿಕ್ಷಣ ಪಡೆಯುತ್ತಿದ್ದ ಪಿಯು ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಹಣ ಸಂಗ್ರಹಿಸಿ ಚಿಕಿತ್ಸೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಮಹೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

Advertisement

ಈಗಾಗಲೇ ಈ ಅಪಘಾತದಲ್ಲಿ ಒಟ್ಟು 7 ಜನ ಮೃತ ಪಟ್ಟಿದ್ದು, 7 ಜನರಲ್ಲಿ 6 ಜನ ವಿದ್ಯಾರ್ಥಿಗಳಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next