Advertisement

ಪರ್ಯಾಯಾಧಿಪತಿ ಪಲಿಮಾರು ಶ್ರೀಗಳಿಂದ ಬಿಲ್ಲವರ ಭವನಕ್ಕೆ ಭೇಟಿ

12:35 PM Sep 22, 2017 | |

ಮುಂಬಯಿ: ಮುಂದಿನ ಉಡುಪಿ ಪರ್ಯಾಯ ಪೀಠವನ್ನು ಅಲಂಕರಿಸಲಿರುವ, ಪರ್ಯಾಯ ಸಂಚಾರಕ್ಕಾಗಿ  ಮುಂಬಯಿ  ಮಹಾನಗರಕ್ಕೆ ಸೆ. 21ರಂದು ಆಗಮಿಸಿದ ಶ್ರೀ ಪಲಿಮಾರು ಮಠಾಧೀಶ ಶ್ರೀ  ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಸಂಜೆ ಸಾಂತಾಕ್ರೂಜ್‌ ಪೂರ್ವದ  ಬಿಲ್ಲವರ ಭವನದ ಶ್ರೀ ನಾರಾಯಣಗುರು ಮಂದಿರಕ್ಕೆ ಪಾದಾರ್ಪಣೆಗೈದು ಪೂಜೆ ಸಲ್ಲಿಸಿದರು.

Advertisement

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಮತ್ತು ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌ ಶ್ರೀಪಾದರಿಗೆ ಪುಷ್ಪಾರ್ಚನೆಗೈದು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಶ್ರೀಗಳು ಭವನದ ಮಂದಿರದಲ್ಲಿ ಪ್ರತಿಷ್ಠಾಪಿತ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ರವೀಂದ್ರ ಶಾಂತಿ ಪೂಜೆಯನ್ನು  ನೆರವೇರಿಸಿ ಮಹಾಮಂಗಳಾರತಿಗೈದರು. ಕೋಟಿ-ಚೆನ್ನಯ ಮತ್ತು ಕಾಂತಬಾರೆ ಬೂದಬಾರೆ ಅವರ ಭಾವಚಿತ್ರಕ್ಕೆ ಸಂತೋಷ್‌ ಕೆ. ಪೂಜಾರಿ ಅವರು ಪುಷ್ಪಾರ್ಚನೆಗೈದು ನಮಿಸಿ ತೀರ್ಥ ಪ್ರಸಾದ ವಿತರಿಸಿದರು.

ಈ ಸಂದರ್ಭದಲ್ಲಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಗೌವ ಜೊತೆ ಕಾರ್ಯದರ್ಶಿಗಳಾದ ಹರೀಶ್‌ ಜಿ. ಸಾಲ್ಯಾನ್‌, ಆಶಾಲತಾ ಕೋಟ್ಯಾನ್‌, ದೇವೇಂದ್ರ ಬಂಗೇರ ಖಾರ್‌, ಭವನದ ವ್ಯವಸ್ಥಾಪಕ ಭಾಸ್ಕರ್‌ ಟಿ. ಪೂಜಾರಿ ಮತ್ತಿತರರು ಉಪಸ್ಥಿತರಿದ್ದು ಶ್ರೀಗಳಿಗೆ ಸಾಂಪ್ರದಾಯಿಕ ಗೌರವ ನೀಡಿದರು. ಮಹಿಳೆಯರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.  

 ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

Advertisement

Udayavani is now on Telegram. Click here to join our channel and stay updated with the latest news.

Next