Advertisement

ಪಳ್ಳಿಯಬ್ಬ ಕೊಲೆ ಪ್ರಕರಣ : ಐವರು ಆರೋಪಿಗಳು ದೋಷಿ

01:22 AM Mar 02, 2023 | Team Udayavani |

ಮಂಗಳೂರು: ಪಾವೂರು ಗ್ರಾಮದ ಮಲಾರ್‌ ಅರಸ್ಥಾನದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಐವರ ಮೇಲಿನ ಆರೋಪ ಸಾಬೀತಾಗಿದೆ. ಆರೋಪಿಗಳು ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷ®Õ… ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಬಸಪ್ಪಬಾಳಪ್ಪ ಜಕಾತಿ ಅವರು ಶಿಕ್ಷೆಯ ಪ್ರಮಾಣವನ್ನು ಮಾ. 3ರಂದು ಪ್ರಕಟಿಸಲಿದ್ದಾರೆ.

Advertisement

ಮಲಾರ್‌ ಅಕ್ಷರ ನಗರ ನಿವಾಸಿಗಳಾದ ಹಂಝ (44), ಅಝರುದ್ದೀನ್‌ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್‌ ಶೇಖ್‌ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್‌ ರಝಾಕ್‌ (20) ಅಥಾವುಲ್ಲ ಯಾನೆ ಅಲ್ತಾಫ್‌ ಆರೋಪಿಗಳು.

ಪ್ರಕರಣದ ವಿವರ
ಪಾವೂರು ಗ್ರಾಮದ ಮಲಾರ್ನ ಪಳ್ಳಿಯಬ್ಬ ಯಾನೆ ಪಳ್ಳಿಯಾಕ (75) ನಾಪತ್ತೆಯಾದ ಬಗ್ಗೆ 2020ರ ಅ. 29ರಂದು ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಅವರನ್ನು ದುಷ್ಕರ್ಮಿಗಳು ವ್ಯವಸ್ಥಿತವಾಗಿ ಹತ್ಯೆಗೈದು ಹೂತು ಹಾಕಿದ್ದರು ಎಂದು ತನಿಖೆಯಿಂದ ಗೊತ್ತಾಗಿತ್ತು. ಕೊಣಾಜೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next