Advertisement

ಪಣಜಿ: ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದ ಕನ್ನಡಿಗ ಸಾವನ್ನಪ್ಪಿದ್ದು ಹೃದಯಾಘಾತದಿಂದ

07:50 PM Jun 03, 2022 | Vishnudas Patil |

ಪಣಜಿ: ಗೋವಾ ರಾಜಧಾನಿ ಪಣಜಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದ ಕರ್ನಾಟಕದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂಬುದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ. ಮೃತದೇಹ ಮತ್ತು ಕಾರನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಪಣಜಿ ಪೋಲಿಸ್ ಇನ್ಸಪೆಕ್ಟರ್ ನಿಖಿಲ್ ಪಾಲೇಕರ್ ಮಾಹಿತಿ ನೀಡಿದ್ದಾರೆ.

Advertisement

ಪಣಜಿಯಲ್ಲಿ ಪಾರ್ಕ ಮಾಡಲಾಗಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿತ್ತು. ಕಾರಿನಲ್ಲಿ ಸಿಕ್ಕ ಡ್ರೈವಿಂಗ್ ಲೈಸನ್ಸ ಆಧಾರದ ಮೇಲೆ ಕಾರಿನಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕರ್ನಾಟಕ ಮೂಲದ ಶ್ರೀಕಾಂತ ಕಚ್ಗಾರ್ ಎಂದು ಗುರುತಿಸಲಾಗಿತ್ತು. ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ ಈತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವರದಿ ನೀಡಿದ್ದಾರೆ.

ಈ ಕಾರು ಮೃತ ಶ್ರೀಕಾಂತ ರವರ ಪತ್ನಿಯದ್ದಾಗಿತ್ತು. ಈ ಹಿನ್ನೆಲೆಯಲ್ಲಿ ಪೋಲಿಸರು ಈ ಶವದೊಂದಿಗೆ ಕಾರನ್ನು ಕೂಡ ಸಂಬಂಧಿಕರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next