Advertisement
ನಗರದ ರಾಮಾನುಜ ರಸ್ತೆಯಲ್ಲಿರುವ ರಾಜಾರಾಮ್ ಅಗ್ರಹಾರದಲ್ಲಿ ಮೈಸೂರು ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷಡಿ.ಟಿ. ಪ್ರಕಾಶ್ ಮನೆ ಮನೆಗಳಿಗೆ ಕ್ಯಾಲೆಂಡರ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಿ, ಸೌರಮಂಡಲದ ಆಧಾರಿತದಮೇಲೆ ಭೂಮಿಯಲ್ಲಿ ನಡೆಯುವ ಬದಲಾವಣೆಯನ್ನು ತಿಳಿಸುವುದೇ ಪಂಚಾಂಗ, ಯುಗಾದಿ ವರ್ಷಾಚರಣೆ ಬೇವು-ಬೆಲ್ಲವು ಕಹಿ, ಸಿಹಿಯ ಸಂಕೇತ. ಸಮ ಬಾಳಿನ ಜೀವನವನ್ನು ಸರಿಯಾದ ಸಂದರ್ಭದಲ್ಲಿ ನಡೆಸಬೇಕಾದರೆ ಪಂಚಾಂಗದ ನಿರ್ಧಾರ ಮುಖ್ಯವಾಗುತ್ತದೆ. ಸಂವತ್ಸರ ಮಾಸ, ತಿಥಿ, ನಕ್ಷತ್ರ, ರಾಶಿಯ ಕಾಲದ ಘಳಿಗೆಯ ಮಾಹಿತಿ ಮೊದಲು ತಿಳಿದುಕೊಳ್ಳಬಹುದು ಎಂದು ತಿಳಿಸಿದರು.
Related Articles
Advertisement
ಈ ವೇಳೆ ನಗರ ಪಾಲಿಕೆ ಸದಸ್ಯ ಮಾ.ವಿ. ರಾಮ್ ಪ್ರಸಾದ್, ಎಂ.ಸಿ. ರಮೇಶ್, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಎಂ.ಆರ್. ಬಾಲಕೃಷ್ಣ , ಬ್ರಾಹ್ಮಣ ಯುವ ವೇದಿಕೆ ಪ್ರಧಾನಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್ ಮತ್ತಿತರರಿದ್ದರು.