Advertisement

ಪಂಚಮಸಾಲಿಗೆ 2A ಮೀಸಲಾತಿ ವಿಚಾರ : ಸಮಗ್ರ ಅಧ್ಯಯನ ನಡೆಸಿ ವರದಿ ನೀಡಲು ಆಯೋಗಕ್ಕೆ CM ಪತ್ರ

10:37 PM Feb 05, 2021 | Team Udayavani |

ಬೆಂಗಳೂರು/ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಅಧ್ಯಯನ ನಡೆಸಿ ವರದಿ ನೀಡುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದಾರೆ.

Advertisement

ಶುಕ್ರವಾರ ಬೆಳಗ್ಗೆಯಷ್ಟೇ ವಿಧಾನಸಭೆಯಲ್ಲಿ ಮೀಸಲಾತಿ ಕುರಿತಂತೆ ಬಸನಗೌಡ ಪಾಟೀಲ್‌ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಮುಖ್ಯಮಂತ್ರಿಗಳು, ಮೀಸಲಾತಿ ನೀಡುವುದು ನನ್ನ ಕೈಯಲ್ಲಿಲ್ಲ ಎಂದು ಹೇಳಿ, ಕೇಂದ್ರ ಸರ್ಕಾರದತ್ತ ಬೆಟ್ಟು ಮಾಡಿದ್ದರು.

ಇದಾದ ಮೇಲೆ ಮೀಸಲಾತಿಗಾಗಿ ಪಾದಯಾತ್ರೆ ನಡೆಸುತ್ತಿರುವ ಪಂಚಮಸಾಲಿ ಶ್ರೀಗಳು, ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಾಜೀನಾಮೆಗೂ ಆಗ್ರಹಿಸಿದ್ದರು.

ಇದನ್ನೂ ಓದಿ:ಎಸ್ಪಿ ಆಪ್ತ ಎಂದು ಹೇಳಿಕೊಂಡು ಹಣ ಕೇಳಿದ ಭೂಪ: 8.50 ಲಕ್ಷ ಕೊಟ್ಟ ಪಿಎಸ್ಐ!

ಆಯೋಗಕ್ಕೆ ಸಿಎಂ ಪತ್ರ
ಪಂಚಮಸಾಲಿ ಶ್ರೀಗಳ ಮಾತುಗಳು ಹೊರಬಿದ್ದ ನಂತರ ಸ್ಪಷ್ಟನೆ ನೀಡಿದ ಸಿಎಂ, ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ತಮ್ಮ ಮಾತನ್ನು ಅಪಾರ್ಥ ಮಾಡಿಕೊಂಡಿದ್ದಾರೆ. ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಈಗಾಗಲೇ ಸಮುದಾಯದ ಸಚಿವರಾದ ಮುರುಗೇಶ್‌ ನಿರಾಣಿ, ಸಿ.ಸಿ. ಪಾಟೀಲ್‌ ಮತ್ತು ಶಾಸಕರೊಂದಿಗೆ ಚರ್ಚೆ ಮಾಡಿದ್ದೇನೆ. ಅಲ್ಲದೆ ಪಾದಯಾತ್ರೆ ಮಾಡುತ್ತಿರುವ ಸ್ವಾಮೀಜಿಗಳ ಮನವೊಲಿಕೆಗೆ ಸಚಿವರನ್ನೂ ಕಳುಹಿಸಿಕೊಟ್ಟಿದ್ದೇನೆ. 2ಎಗೆ ಸೇರಿಸುವ ಕುರಿತು ಅಧ್ಯಯನ ನಡೆಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next