Advertisement

ತುದೂರು PDO ಪ್ರಕಾಶ್ ಅನಾರೋಗ್ಯದಿಂದ ನಿಧನ

10:00 PM Nov 18, 2023 | Vishnudas Patil |

ತೀರ್ಥಹಳ್ಳಿ : ತಾಲೂಕಿನ ತುದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶ್ (58) ಮಣಿಪಾಲದ  ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲತಃ ಬೆಜ್ಜವಳ್ಳಿಯವರಾದ ಪ್ರಕಾಶ್ ಕಳೆದ 5 ವರ್ಷಗಳಿಂದ ತುದೂರು ಗ್ರಾಮಪಂಚಾಯಿತಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅದಕ್ಕೂ ಮೊದಲು ಹುಂಚದಕಟ್ಟೆಯಲ್ಲಿ ಕೆಲವು ವರ್ಷಗಳ ಕಾಲ ಸೇವಾವಧಿ ಸೇವೆ ಸಲ್ಲಿಸಿದರು.

ಪ್ರಕಾಶ್ ಅವರ ಅಕಾಲಿಕ ಮರಣಕ್ಕೆ ತೂದೂರು ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಧುರಾಜ್ ಹೆಗಡೆ ಸೇರಿದಂತೆ ಅನೇಕ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next