Advertisement

Sandalwood: ಟೀಸರ್‌ನಲ್ಲಿ ಪಂಚೇಂದ್ರಿಯಂ

02:09 PM Mar 31, 2024 | Team Udayavani |

“ಪಂಚೇಂದ್ರಿಯಂ’ ಸಿನಿಮಾದ ಹಾಡು ಹಾಗೂ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಹೆಚ್‌ ಸೋಮಶೇಖರ್‌ ನಿರ್ಮಿಸಿರುವ ಈ ಚಿತ್ರವನ್ನು ಆರನ್‌ ಕಾರ್ತಿಕ್‌ ವೆಂಕಟೇಶ್‌ ನಿರ್ದೇಶನ ಮಾಡಿದ್ದಾರೆ.

Advertisement

“ದೃಷ್ಟಿ, ಶ್ರವಣ, ವಾಸನೆ, ರುಚಿ ಹಾಗೂ ಸ್ಪರ್ಶ ಇವು ಮಾನವನ ದೇಹವನ್ನು ರೂಪಿಸುವ ಐದು ಅಂಗಗಳು. ಈ ಪಂಚೇಂದ್ರಿಯ ಗಳನ್ನು ದೇವರು ಸದ್ಬಳಿಕೆಗಾಗಿ ನೀಡಿದ್ದಾನೆ. ನಾವು ಅದನ್ನು  ದುರ್ಬಳಿಕೆ ಮಾಡಿಕೊಂಡಾಗ ಏನಾಗುತ್ತದೆ ಎಂಬುದೇ ಈ ಚಿತ್ರದ ಪ್ರಮುಖ ಕಥಾಹಂದರ’ ಎನ್ನುವುದು ನಿರ್ದೇಶಕರ ಮಾತು.

ವಿನಯ್‌ ಸೂರ್ಯ ಈ ಚಿತ್ರದ ನಾಯಕರಾಗಿ ಹಾಗೂ ವಿದ್ಯಾಶ್ರೀ ಮತ್ತು ರಾಘವಿ ನಾಯಕಿಯ ರಾಗಿ ನಟಿಸಿದ್ದಾರೆ. ‌

ದೇವರಾಯನ­ದುರ್ಗ, ದಾಬಸ್‌ ಪೇಟೆ ಮುಂತಾದ ಕಡೆ ಚಿತ್ರೀಕರಣ­ವಾಗಿದೆ.  “ಜಕ್ಕಣಾಚಾರಿ ಅವನ ತಮ್ಮ ಶುಕ್ಲಾಚಾರಿ ಚಿತ್ರದಲ್ಲಿ ಬಾಲನಟನಾಗಿ ಅಭಿಯಿಸಿದ್ದ ನಾನು, ಈ ಚಿತ್ರದ ಮೂಲಕ ನಾಯಕನಾಗಿದ್ದೇನೆ’ ಎಂದರು ವಿನಯ್‌ ಸೂರ್ಯ. ಚಿತ್ರದಲ್ಲಿ ಅಭಿನಯಿಸಿರುವ ಯತಿರಾಜ್, ವಿಕ್ಟರಿ ವಾಸು ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next