Advertisement

ಪಂಡಿತ್ ವೆಂಕಟೇಶಕುಮಾರ್ ಅವರಿಗೆ ಪ್ರತಿಷ್ಠಿತ ಕಾಳಿದಾಸ ಸಮ್ಮಾನ್ ಪ್ರಶಸ್ತಿ

03:31 PM Feb 04, 2022 | Team Udayavani |

ಧಾರವಾಡ : ಹೆಸರಾಂತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪ್ರೊ.ಎಂ.ವೆಂಕಟೇಶ ಕುಮಾರ್ ಅವರು ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement

2017 ನೇ ಸಾಲಿನ ಪುರಸ್ಕಾರ ಕಳೆದ ಡಿಸೆಂಬರ್‌ನಲ್ಲಿ ಪ್ರಕಟವಾಗಿದೆ.ಹಿಂದೂಸ್ಥಾನಿ ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ,ಸಾಧನೆಗಳನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಮಧ್ಯ ಪ್ರದೇಶ ಸರ್ಕಾರದ ಸಂಸ್ಕೃತಿ ಸಚಿವಾಲಯದ ಸಂಚಾಲಕ ಆದಿತಿಕುಮಾರ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂ.ಗಳ ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,ಪದ್ಮಶ್ರೀ, ಸೇರಿದಂತೆ ಸಂಗೀತ ಕ್ಷೇತ್ರದ ಅನೇಕ ಪ್ರಶಸ್ತಿ ಪುರಸ್ಕಾರ ಗಳು ಪಂ.ವೆಂಕಟೇಶ ಕುಮಾರ್ ಅವರಿಗೆ ಲಭಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next