Advertisement

ವಿಶೇಷಾಧಿಕಾರ ಕಾಯ್ದೆ ರದ್ದು: ಸಮಿತಿ ರಚನೆಗೆ ಕೇಂದ್ರ ಒಪ್ಪಿಗೆ

10:59 PM Dec 26, 2021 | Team Udayavani |

ಹೊಸದಿಲ್ಲಿ: ಮಾಸಾಂತ್ಯಕ್ಕೆ ನಾಗಾಲ್ಯಾಂಡ್‌ನ‌ಲ್ಲಿ ಸಶಸ್ತ್ರ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರ ಕಾಯ್ದೆಯ ಹಾಲಿ ವಿಸ್ತರಣೆ ಅವಧಿ ಮುಕ್ತಾಯವಾಗಲಿದೆ. ಅದಕ್ಕೆ ಪೂರಕವಾಗಿ ಕಾಯ್ದೆಯನ್ನು ವಾಪಸ್‌ ಪಡೆಯುವ ಬಗ್ಗೆ ವಿಶೇಷ ಸಮಿತಿ ರಚನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಮ್ಮತಿ ಸೂಚಿಸಿದ್ದಾರೆ.

Advertisement

ಈ ಬಗ್ಗೆ ರವಿವಾರ ಹೊಸದಿಲ್ಲಿಯಲ್ಲಿ ಹೇಳಿಕೆ ಬಿಡುಗಡೆ ಮಾಡಲಾಗಿದೆ. ನಾಗಾಲ್ಯಾಂಡ್‌ ಮುಖ್ಯ ಮಂತ್ರಿ ನೆಪ್ಯೂ ರಿಯೋ, ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮ, ಮಾಜಿ ಮುಖ್ಯಮಂತ್ರಿ ಟಿ.ಆರ್‌. ಝೇಲಿಂಗ್‌ ಮತ್ತು ಇತರರ ಜತೆಗೆ ಗುರುವಾರ ನಡೆಸಲಾಗಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಕೇಂದ್ರ ಗೃಹ ಖಾತೆಯಲ್ಲಿ ಈಶಾನ್ಯ ರಾಜ್ಯಗಳಿಗಾಗಿ ಇರುವ ಹೆಚ್ಚುವರಿ ಕಾರ್ಯದರ್ಶಿ ಸಮಿತಿಯ ನೇತೃತ್ವ ವಹಿಸಲಿದ್ದಾರೆ.

ಇದರ ಜತೆಗೆ ನಾಗಾಲ್ಯಾಂಡ್‌ನ‌ಲ್ಲಿ ಇತ್ತೀಚೆಗೆ 14 ಮಂದಿ ನಾಗರಿಕರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಲು ವಿಶೇಷ ಸಮಿತಿ ರಚನೆ ಮಾಡಲೂ ನಿರ್ಧರಿಸಲಾಗಿದೆ. ನ. 20ರಂದು ಸಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆ ವಿರುದ್ಧ ನಾಗಾಲ್ಯಾಂಡ್‌ ವಿಧಾನಸಭೆಯಲ್ಲಿ ವಿಶೇಷ ನಿರ್ಣಯವನ್ನೂ ಕೈಗೊಳ್ಳಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next