Advertisement

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

12:51 AM Sep 28, 2023 | Team Udayavani |

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಬುಧವಾರ ಸಂಜೆ ಖಾಸಗಿ ಬಸ್ಸೊಂದು ಕೆಟ್ಟು ನಿಂತು ಹೆದ್ದಾರಿಯಲ್ಲಿ ಸುಮಾರು ಒಂದು ತಾಸು ಹೊತ್ತು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.
ಪುತ್ತೂರಿನಿಂದ ಮಂಗಳೂರಿನತ್ತ ಆಗಮಿಸುತ್ತಿದ್ದ ಕಾಂಟ್ರಾಕ್ಟ್ ಕ್ಯಾರೇಜ್ ಬಸ್‌ ಸೇತುವೆ ಮಧ್ಯೆ ಕೆಟ್ಟಿದ್ದು, ಹೀಗಾಗಿ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಅವಕಾಶವಿತ್ತು.

Advertisement

ಸೇತುವೆಯಲ್ಲಿ ಬಸ್‌ ನಿಂತ ಪರಿಣಾಮ ಬದಿಗೆ ಸರಿಸುವುದು ಕೂಡ ಸಾಧ್ಯವಾಗಲಿಲ್ಲ.ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಈ ವೇಳೆ ಹೆದ್ದಾರಿಯಲ್ಲಿ ಹೆಚ್ಚಿನ ವಾಹನ ಸಂಚಾರವಿದ್ದ ಕಾರಣ ಹೆದ್ದಾರಿಯ ಎರಡೂ ಬದಿ ವಾಹನಗಳು ಸಾಲಾಗಿ ನಿಲ್ಲಬೇಕಾಯಿತು. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಕಾರ್ಯ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next