Advertisement

ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

08:38 PM Mar 26, 2023 | Team Udayavani |

ಬಂಟ್ವಾಳ: ಪುತ್ತೂರು ಮೂಲದ ಯುವಕನೋರ್ವ ಪಾಣೆಮಂಗಳೂರಿನ ಗೂಡಿನಬಳಿ ಹಳೆ ಸೇತುವೆಯ ಸಮೀಪ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.

Advertisement

ಪುತ್ತೂರು ಸಮೀಪ ಕೆಮ್ಮಿಂಜೆ ನಿವಾಸಿ, ಪುತ್ತೂರು ಕೋರ್ಟ್‌ ರಸ್ತೆಯ ವರ್ತಕ ವಿಘ್ನೇಶ್‌ ಕಾಮತ್‌(32) ಅವರು ಆತ್ಮಹತ್ಯೆ ಮಾಡಿಕೊಂಡವರು. ರವಿವಾರ ಮಧ್ಯಾಹ್ನ 1ರ ಸುಮಾರಿಗೆ ಯುವಕ ಪುತ್ತೂರು ಭಾಗದಿಂದ ಆಗಮಿಸಿ ತಮ್ಮ ಸ್ಕೂಟರನ್ನು ಸೇತುವೆಯ ಮೇಲೆ ನಿಲ್ಲಿಸಿ ನದಿಗೆ ಹಾರಿದ್ದಾರೆ.

ಬಳಿಕ ಸ್ಥಳೀಯ ಈಜುಗಾರ ಯುವಕರು ನದಿಗೆ ಹಾರಿ ಆತನ ರಕ್ಷಣೆಗೆ ಮುಂದಾಗಿದ್ದು, ಮೇಲಕ್ಕೆತ್ತುವ ಸಂದರ್ಭದಲ್ಲಿ ಮೃತಪಟ್ಟಿದ್ದರು. ಪುತ್ತೂರಿನ ಕೋರ್ಟ್‌ ರಸ್ತೆಯಲ್ಲಿ ಅಂಗಡಿ ನಡೆಸುತ್ತಿದ್ದ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿಲ್ಲ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next