Advertisement
ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಲು ಹಗಲಿರುಳು ಶ್ರಮಿಸುತ್ತಿದ್ದರೆ ವಿರೋಧಿಗಳು ಅದನ್ನೇ ಪ್ರಶ್ನಿಸಿ, ಸಾಕ್ಷಿ ಕೇಳುತ್ತಾರೆ. ನಮ್ಮ ಯೋಧರ ಮೇಲೆ ದಾಳಿ ನಡೆದ ಆನಂತರ ಪ್ರಧಾನಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಉಗ್ರರನ್ನು ಮಟ್ಟಹಾಕಿದ್ದಾರೆ. ಇದಕ್ಕೂ ಸಾಕ್ಷಿ ಕೇಳುತ್ತಿರುವ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿಕೊಂಡ ರಾಹುಲ್ ಗಾಂಧಿಯ ಕೊರಳಿಗೆ ಬಾಂಬ್ ಕಟ್ಟಿ ದೇಶದಿಂದ ಹೊರಗೆ ದಬ್ಬಬೇಕು ಎಂದು ಎಂದು ಗ್ರಾಮೀಣಾಭಿವೃದ್ಧಿ ಸಚಿವೆ ಪಂಕಜಾ ಮುಂಢೆ ಹೇಳಿ ಎಲ್ಲರ ಕೆಂಗಣ್ಣಿಗೆ ತುತ್ತಾಗಿದ್ದಾರೆ.
Related Articles
ಕಾಂಗ್ರೆಸ್ ಸಚಿವೆ ಪಂಕಜಾ ಮುಂಢೆ ಅವರ ಹೇಳಿಕೆಯನ್ನು ಖಂಡಿಸಿದೆ. ಬಿಜೆಪಿ ಕೀಳು ರಾಜಕೀಯ ಮಾಡುತ್ತಿದೆ. ಬಿಜೆಪಿ ನಾಯಕರ ಕೀಳುಮಟ್ಟದ ಚಿಂತನೆಗಳನ್ನು ಈ ಹೇಳಿಕೆ ಮತ್ತೂಮ್ಮೆ ಅನಾವರಣಗೊಳಿಸಿದೆ. ಅವರಿಂದ ನಾವು ಬೇರೇನನ್ನೂ ನಿರೀಕ್ಷಿಸಲಾರೆವು. ಹುತಾತ್ಮರೊಬ್ಬರನ್ನು ದೇಶದ್ರೋಹಿ ಎಂದು ಜರೆಯುವ ಅವರಿಂದ ಏನನ್ನು ನಿರೀಕ್ಷಿಸಬಹುದು. ಸಚಿವೆ ಪಂಕಜಾ ಮುಂಢೆ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಪ್ರತಿಕ್ರಿಯಿಸಿದರು. ಜಾಲಾ° ಬಿಜೆಪಿಯ ಭದ್ರಕೋಟೆಯಾಗಿದ್ದು, 1996 ರಿಂದಲೂ ಬಿಜೆಪಿ ಗೆಲ್ಲುತ್ತಲೇ ಬಂದಿದೆ. 2014 ರಲ್ಲಿ ಬಿಜೆಪಿಯ ದಾದಾರಾವ್ ಕಾಂಗ್ರೆಸ್ನ ಎ. ವಿ. ಕೇಶವ ರಾವ್ ಅವರನ್ನು 2 ಲಕ್ಷಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದರು.
Advertisement