Advertisement

ಪನ್ವೇಲ್‌ ಶ್ರೀ ಕಾಳಿಕಾಂಬಾ ವಿನಾಯಕ ದೇಗುಲ: ವಿಗ್ರಹಗಳ ಜಲಾಧಿವಾಸ

04:20 PM Feb 07, 2018 | |

ನವಿ ಮುಂಬಯಿ: ಶ್ರೀ ಕಾಳಿಕಾಂಬಾ ವಿಶ್ವಕರ್ಮ ಸೇವಾ ಸಂಘ ಪನ್ವೇಲ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಫೆ. 19 ರಂದು ಪ್ರತಿಷ್ಠಾಪನೆಗೊಳ್ಳಲಿರುವ ಶ್ರೀ ಕಾಳಿಕಾಂಬಾ, ಶ್ರೀ ವಿನಾಯಕ, ಶ್ರೀ ಆಂಜನೇಯ ಮತ್ತು ನಾಗದೇವರ ವಿಗ್ರಹಗಳ ಜಲಾಧಿವಾಸವು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಡಿ. 27ರಂದು ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದವು.

Advertisement

ದೇವಸ್ಥಾನದ ತಂತ್ರಿಗಳಾದ ಪುರೋಹಿತ ಅಕ್ಷಯ್‌ ಶರ್ಮಾ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ದರು. ಸಂಘದ ಅಧ್ಯಕ್ಷ ಕಣ್ಣಪ್ಪ ಆಚಾರ್ಯ, ಉಪಾಧ್ಯಕ್ಷ ಬಿ. ನರಸಿಂಹ ಆಚಾರ್ಯ, ಗೌರವ ಪ್ರಧಾನ ಕೋಶಾಧಿಕಾರಿ ಸಿಎ ಶ್ರೀಧರ ಆಚಾರ್ಯ, ಕಟ್ಟಡ ಸಮಿತಿಯ ಸಂಚಾಲಕ ಶೈಲೇಶ್‌ ಆಚಾರ್ಯ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅನ್ನಪೂರ್ಣಾ ಶ್ರೀಧರ ಆಚಾರ್ಯ, ಯುವ ವಿಭಾಗದ ಕಾರ್ಯಾಧ್ಯಕ್ಷ ಕಿರಣ್‌ ಆಚಾರ್ಯ, ಪ್ರಧಾನ ಕಾರ್ಯದರ್ಶಿ ವಿಜಯ ಆನಂದ್‌ ಆಚಾರ್ಯ, ಗೌರವ ಕೋಶಾಧಿಕಾರಿ ಮೋಹನ್‌ ಆಚಾರ್ಯ ಹಾಗೂ ವಿಶ್ವಕರ್ಮ ಸಮಾಜ ಬಾಂಧವರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next