Advertisement

ಈಗಲ್ಟನ್‌ ರೆಸಾರ್ಟ್‌ಗೆ ಪರಂ, ಬಾಲಕೃಷ್ಣ ಭೇಟಿ

03:22 PM Aug 04, 2017 | Team Udayavani |

ರಾಮನಗರ: ಗುಜರಾತ್‌ನ ಕಾಂಗ್ರೆಸ್‌ ಶಾಸಕರು ಇರುವ ಈಗಲ್ಟನ್‌ ರೆಸಾರ್ಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಭೇಟಿ ನೀಡಿ ಶಾಸಕರ ಕುಶಲೋಪರಿ ವಿಚಾರಿಸಿದರು. ಮೂವರು ಶಾಸಕರು ಅನಾರೋಗ್ಯದಿಂದ ಬಳಲುತ್ತಿದ್ದು, ಇವರು ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಮಾತನಾಡಿದ ಪರಮೇಶ್ವರ್‌, ಗುಜರಾತ್‌ ಶಾಸಕರೆಲ್ಲರೂ ಆರೋಗ್ಯದಿಂದ ಇದ್ದಾರೆ. ಎಲ್ಲರೂ ಆರಾಮವಾಗಿದ್ದಾರೆ. ಜ್ಯೋತಿಬಾಯಿ ಪಟೇಲ್‌ ಎಂಬುವರು ಮಾತ್ರ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ವಾಪಸು ಬಂದಿದ್ದಾರೆ ಎಂದು ತಿಳಿಸಿದರು.

Advertisement

ಬಾಲಕೃಷ್ಣ ಚರ್ಚೆ: ಈಗಲ್ಟನ್‌ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್‌ನ ಕಾಂಗ್ರೆಸ್‌ ಶಾಸಕರನ್ನು ಜೆಡಿಎಸ್‌ ಬಂಡಾಯ ಶಾಸಕ ಎಚ್‌.ಸಿ. ಬಾಲಕೃಷ್ಣ ಭೇಟಿ ಮಾಡಿ ಚರ್ಚಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಾಲಕೃಷ್ಣ, ಈ ರೆಸಾರ್ಟ್‌ ನನ್ನ ಕ್ಷೇತ್ರದಲ್ಲಿ ಬರುವ ಕಾರಣ ಇಲ್ಲಿಗೆ ಬಂದಿದ್ದೇನೆ. ಜತೆಗೆ ಸಂಸದ ಡಿ.ಕೆ. ಸುರೇಶ್‌ರನ್ನು ಭೇಟಿಮಾಡಿದ್ದೇನೆ. ಗುಜರಾತ ಶಾಸಕರು ರೆಸಾರ್ಟ್‌ನಲ್ಲಿ ಸಂತೋಷವಾಗಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next