Advertisement

ಮಾಧ್ಯಮದವರ ವಿರುದ್ಧ ಪರಮೇಶ್ವರ್ ಸಿಡಿಮಿಡಿ

11:28 AM Oct 03, 2017 | Karthik A |

ಬೆಂಗಳೂರು: “ಮುಂದಿನ ಮುಖ್ಯಮಂತ್ರಿ ಯಾರು’, “ಬರುವ ವರ್ಷ ದಸರಾ ಯಾರು ಉದ್ಘಾಟಿಸುತ್ತಾರೆ’ ಎಂಬ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಕೆಪಿಸಿಸಿ ಅಧ್ಯಕ್ಷ
ಡಾ. ಜಿ. ಪರಮೇಶ್ವರ್ ಸಿಟ್ಟಾದ ಪ್ರಸಂಗ ಸೋಮವಾರ ನಡೆಯಿತು. 

Advertisement

ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮ ದಿನಾಚರಣೆ ಕಾರ್ಯಕ್ರಮದ ಬಳಿಕ, “ಮುಂದಿನ ವರ್ಷ ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರಲ್ಲ’ ಎಂಬ ಮಾಧ್ಯಮದವರ ಪ್ರಶ್ನೆಗೆ ಪರಮೇಶ್ವರ್ ಗರಂ ಆದರು. “ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಆದರೆ, ಯಾರಾದರೊಬ್ಬರ
ಮುಂದಾಳತ್ವ ಬೇಕಲ್ಲ? ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರೇ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಮುಂದಿನ ಚುನಾವಣೆಗೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹೋಗುತ್ತೇವೆ. ಮುಖ್ಯಮಂತ್ರಿ ಯಾರು ಅನ್ನುವುದನ್ನು ಹೈ ಕಮಾಂಡ್ ತೀರ್ಮಾನಿಸುತ್ತದೆ. ಸಿದ್ದರಾಮಯ್ಯನವರೇ ಸಿಎಂ ಆಗಬೇಕು ಎಂದು ಹೈಕಮಾಂಡ್ ಹೇಳಿದರೆ, ಎಲ್ಲರೂ ಒಪ್ಪಿಕೊಳ್ಳುತ್ತೇವೆ. ಯಾವ ಗೊಂದಲಗಳೂ ಇಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕೃತವಾಗಿ ಈ ಮಾತು ಹೇಳುತ್ತಿದ್ದೇನೆ. ಯಾರು ಏನೇ ಹೇಳಿದರೂ ಅದಕ್ಕೆಲ್ಲ ಕಿಮ್ಮತ್ತು ಕೊಡಬೇಡಿ’ ಎಂದು ಪರಮೇಶ್ವರ್ ಹೇಳಿದರು.

ಇದೇ ವೇಳೆ ಮುಂದಿನ ಬಾರಿ ನಾನೇ ಸಿಎಂ ಆಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರಲ್ಲ ಎಂದು ಕೇಳಿದ್ದಕ್ಕೆ “ಅವರು ಹೇಳಿದ್ದ ಕ್ಕೆಲ್ಲ ನಾನು ಯಾಕೆ ಪ್ರತಿಕ್ರಿಯೆ ಕೊಡಬೇಕು’, ಅದನ್ನೆಲ್ಲಾ ನನ್ನನ್ನು ಯಾಕೆ ಕೇಳ್ತೀರಾ. ಅವರು ಹೇಳಿದರು ಎಂದು ನಮ್ಮ ಬಳಿ, ನಾವು ಹೇಳಿದೇವು ಎಂದು ಅವರ ಬಳಿ ಹೋಗ್ತಿರಾ. ಅವರೊಂದು ಹೇಳ್ಳೋದು, ನಾನೊಂದು ಹೇಳ್ಳೋದು ಇದೇನು ಹುಡುಗಾಟನಾ?. ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಕೇಳಿ, ಅದಕ್ಕೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಪರಮೇಶ್ವರ್ ಮತ್ತೂಮ್ಮೆ ಗರಂ ಆದರು.

Advertisement

Udayavani is now on Telegram. Click here to join our channel and stay updated with the latest news.

Next