Advertisement

ಪರಮೇಶ್ವರ್‌ ಅಸಮಾಧಾನ

12:30 AM Mar 19, 2019 | Team Udayavani |

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ನೀಡಿರುವುದರಿಂದ ತಮಗೆ ಅಸಮಾಧಾನ ಮತ್ತು ಆತಂಕವಾಗಿದೆ.

Advertisement

ಆ ಕ್ಷೇತ್ರವನ್ನು ವಾಪಸ್‌ ಪಡೆಯುವ ಸಂಬಂಧ ನಮ್ಮ ವರಿಷ್ಠರ ಗಮನಕ್ಕೆ ತಂದಿದ್ದೇನೆ ಎಂದು ಉಪ ಮುಖ್ಯಮಂತ್ರಿ
ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ರಾಜ್ಯದ 10 ಕ್ಷೇತ್ರದಲ್ಲಿ ಕಾಂಗ್ರೆಸ್‌ ಸಂಸದರಿದ್ದು, ಈ ಕ್ಷೇತ್ರಗಳ ಅಭ್ಯರ್ಥಿ ಬದಲಾವಣೆ ಬೇಡ ಎನ್ನಲಾಗಿತ್ತು. ಆದರೆ
ಅಂತಿಮವಾಗಿ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದು ಅಸಮಾಧಾನ ಮತ್ತು ಆತಂಕವಾಗಿದೆ.ತುಮಕೂರಿನಲ್ಲಿ ಕಾಂಗ್ರೆಸ್‌ ಗೆಲ್ಲುವ ಪರಿಸ್ಥಿತಿ ಇದೆ. ಇದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.

ತುಮಕೂರು ಕ್ಷೇತ್ರವನ್ನು ವಾಪಸ್‌ ಕೊಡುವಂತೆ ದೇವೇಗೌಡರು, ಹಾಗೂ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದೇನೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.ತೀರ್ಮಾನ ನೋಡಬೇಕು. ದೇವೇಗೌಡರೇ ಸ್ಪರ್ಧಿಸಿದರೆ ಸ್ವಾಗತಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next