Advertisement

ಪರಮೇಶ್ವರ್‌ ಪರಿಷತ್‌ ಸದಸ್ಯತ್ವ ರದ್ದು

07:10 AM May 25, 2018 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿರುವುದರಿಂದ ವಿಧಾನ ಪರಿಷತ್‌ ಸ್ಥಾನಕ್ಕೆ ಡಾ.ಜಿ. ಪರಮೇಶ್ವರ್‌ ರಾಜೀನಾಮೆ ನೀಡಲು ಮುಂದಾದರೂ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಸ್ವೀಕರಿಸಲಿಲ್ಲ. ಶಾಸಕರಾಗಿ ಆಯ್ಕೆಯಾಗಿರುವುದರಿಂದ ಪರಿಷತ್‌ ಸದಸ್ಯತ್ವ ತನ್ನಿಂತಾನೇ ರದ್ದಾಗುತ್ತದೆ ಎಂದು ಹೇಳಿದ್ದಾರೆ.

Advertisement

ಪರಮೇಶ್ವರ್‌ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿರುವುದರಿಂದ ಒಬ್ಬ ವ್ಯಕ್ತಿ ಏಕಕಾಲಕ್ಕೆ ಎರಡು ಮನೆಯ ಸದಸ್ಯರಾಗಿ ಮುಂದುವರಿಯಲು ಬರುವುದಿಲ್ಲ ಎನ್ನುವ ಕಾರಣಕ್ಕೆ ಗುರುವಾರ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

ಆದರೆ, 1956ರ ಜನ ಪ್ರತಿನಿಧಿ ಕಾಯ್ದೆ ಅನ್ವಯ ಕರ್ನಾಟಕದಲ್ಲಿ ವಿಧಾನ ಪರಿಷತ್‌ ಸದಸ್ಯರು ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿ ಸರ್ಕಾರಿ ಅಧಿಸೂಚನೆ ಹೊರಡಿಸಿದ ತಕ್ಷಣ ಅವರ ವಿಧಾನ ಪರಿಷತ್‌ ಸದಸ್ಯತ್ವ ತಾನಾಗಿಯೇ ರದ್ದಾಗುತ್ತದೆ. ಹೀಗಾಗಿ ಪ್ರತ್ಯೇಕವಾಗಿ ರಾಜೀನಾಮೆ ಸಲ್ಲಿಸುವ ಅಗತ್ಯವಿಲ್ಲ ಎಂದು ಶಂಕರಮೂರ್ತಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next