Advertisement

State Govt; ಪರಮೇಶ್ವರ್‌ ರಾಜೀನಾಮೆ ಕೊಡಲಿ: ಭಾಸ್ಕರ್‌ ರಾವ್‌

11:20 PM Sep 10, 2024 | Team Udayavani |

ಬೆಂಗಳೂರು: ರಾಷ್ಟ್ರೀಯ ಪಕ್ಷವಾದ ಬಿಜೆಪಿಯ ಕಚೇರಿಗೆ ಭದ್ರತೆ ಒದಗಿಸಿಕೊಡುವುದಕ್ಕೂ ರಾಜ್ಯಸರಕಾರ ಹಿಂದೆ ಮುಂದೆ ನೋಡುತ್ತಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬೇಹುಗಾರಿಕೆಯ ಅತ್ಯಂತ ದೊಡ್ಡ ವೈಫ‌ಲ್ಯವಾಗಿದ್ದು ಅಸಮರ್ಥ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತತ್‌ಕ್ಷಣ ರಾಜೀನಾಮೆ ನೀಡಬೇಕೆಂದು ಮಾಜಿ ಪೊಲೀಸ್‌ ಆಯುಕ್ತ, ಬಿಜೆಪಿ ಮುಖಂಡ ಭಾಸ್ಕರ್‌ ರಾವ್‌ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

Advertisement

ಬಿಜೆಪಿ ರಾಜ್ಯ ಕಚೇರಿಯನ್ನು ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದು ಎನ್‌ಐಎ ತನಿಖೆಯಿಂದ ಬಹಿರಂಗಗೊಂಡಿದೆ. ಇದೇ ವಿಚಾರವನ್ನು ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ.

ರಾಜ್ಯದ ಗೃಹ ಸಚಿವರು ಸಂಪೂರ್ಣ ಅಸಮರ್ಥರಾಗಿದ್ದಾರೆ. ಅವರು ರಾಜೀನಾಮೆ ಕೊಡಬೇಕು. ಇಲ್ಲವಾದರೆ ಮುಖ್ಯಮಂತ್ರಿಗಳು ಅವರನ್ನು ವಜಾ ಮಾಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next