Advertisement

ಪರಂ ಪ್ರಮಾಣವಚನ ಸಂವಿಧಾನ ಬಾಹಿರ; ಹೈಕೋರ್ಟ್ ಗೆ ಪಿಐಎಲ್

12:26 PM Jun 01, 2018 | Sharanya Alva |

ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದು ಸಂವಿಧಾನ ಬಾಹಿರ. ಈ ನಿಟ್ಟಿನಲ್ಲಿ ಡಿಸಿಎಂ ಹುದ್ದೆ ರದ್ದು ಕೋರಿ ಮೈಸೂರಿನ ಶೇಖರ್ ಅಯ್ಯರ್ ಎಂಬವರು ಹೈಕೋರ್ಟ್ ಗೆ ಶುಕ್ರವಾರ ಪಿಐಎಲ್ ಸಲ್ಲಿಸಿದ್ದಾರೆ.

Advertisement

ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಎಂಬ ಹುದ್ದೆ ಇಲ್ಲ. ಆದರೆ ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಂವಿಧಾನದಲ್ಲಿ ಇಲ್ಲದೇ ಇರುವ ಹುದ್ದೆಯನ್ನು ಸೃಷ್ಟಿಸುವ ಅಗತ್ಯವಿದೆಯೇ, ಸಂವಿಧಾನ ಮಾನ್ಯತೆ ಇಲ್ಲದೆ ಹುದ್ದೆ ಕಾನೂನು ಬಾಹಿರ.ಹೀಗಾಗಿ ಡಿಸಿಎಂ ಹುದ್ದೆಯನ್ನು ರದ್ದು ಮಾಡಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next