Advertisement

‘ಕೇಂದ್ರ ರೈತರ ಸಾಲ ಏಕೆ ಮನ್ನಾ ಮಾಡಿಲ್ಲ’

03:10 AM Dec 24, 2018 | Team Udayavani |

ಜಮಖಂಡಿ: ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಹೇಳುತ್ತಾರೆ. ರಾಜ್ಯದಲ್ಲಿ ಯಡಿಯೂರಪ್ಪ ಕೂಡ ಸಮ್ಮಿಶ್ರ ಸರಕಾರ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಬಡಿದುಕೊಳ್ಳುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ರೈತರ ಸಾಲ ಏಕೆ ಮನ್ನಾ ಮಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಪ್ರಶ್ನಿಸಿದರು. ಕೇಂದ್ರ ಸರಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಸಾಲ ಮನ್ನಾ ಮಾಡಬಹುದಿತ್ತು. ರೈತರ ಒಂದು ಪೈಸೆ ಸಾಲವನ್ನೂ ಕೇಂದ್ರ ಮನ್ನಾ ಮಾಡಿಲ್ಲ  ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next