Advertisement
ಹಿರಿಯ ಮತ್ತು ಕಿರಿಯ ಅಧಿಕಾರಿಗಳ ಪರಸ್ಪರ ಕೆಸರೆರಚಾಟದಿಂದ ತೀವ್ರ ಮುಜುಗರಕ್ಕೊಳಗಾದ ರಾಜ್ಯ ಸರ್ಕಾರದ ಹಗರಣದ ಸಂಪೂರ್ಣ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ವಿನಯ್ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ವಾರದೊಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಅಂತಿಮ ವರದಿಯನ್ನು ಮೂರು ತಿಂಗಳೊಳಗೆ ನೀಡುವಂತೆ ಆದೇಶಿಸಿತ್ತು. ಜುಲೈ 16ರಿಂದ ವಿನಯಕುಮಾರ್ ನೇತೃತ್ವದ ತಂಡ ತನಿಖೆ ಆರಂಭಿಸಿ 10 ದಿನಗಳಲ್ಲಿ ಪ್ರಾಥಮಿಕ ವರದಿ ಸಲ್ಲಿಸಿತ್ತು. ಪ್ರಾಥಮಿಕ ತನಿಖೆಯಿಂದ ರೂಪಾ ಅವರು ಆರೋಪಿಸಿದ್ದಂತೆ ಜೈಲಿನಲ್ಲಿ ಯಾವುದೇ ರೀತಿಯ ವ್ಯತ್ಯಾಸ ಕಂಡು ಬಂದಿಲ್ಲ. ಆದರೆ, ಸಂಪೂರ್ಣ ತನಿಖೆಯ ಬಳಿಕ ಎಲ್ಲವು ತಿಳಿಯಲಿದೆ ಎಂದು ಹೇಳಲಾಗಿತ್ತು.
ಈ ಮಧ್ಯೆ, ಹಗರಣ ತನಿಖೆ ನಡೆಸುತ್ತಿರುವ ನಿವೃತ್ತ ಐಎಎಸ್ ಅಧಿಕಾರಿ ವಿನಯ್ಕುಮಾರ್ಗೆ ಹೃದಯ ಸಂಬಂಧಿ ಕಾಯಿಲೆ ಉಂಟಾಗಿ, ಅಸ್ವಸ್ಥಗೊಂಡಿದ್ದರು. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನಿಖೆ ಮುಕ್ತಾಯಗೊಂಡಿದ್ದರೂ ವಿನಯಕುಮಾರ್ಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವರದಿ ಸಲ್ಲಿಕೆಯಾಗಿಲ್ಲ. ಅವರು ಗುಣಮುಖರಾಗಿ ಬಂದ ನಂತರ ಸಲ್ಲಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಮೂಲಗಳ ಪ್ರಕಾರ ಹಗರಣದ ಕುರಿತ ಆರೋಪಿತ ಅಧಿಕಾರಿಗಳ ವಿಚಾರಣೆ ಮುಕ್ತಾಯವಾಗಿದೆಯೇ ಹೊರತು, ವರದಿ ಸಿದ್ಧವಾಗಿಲ್ಲ.
Related Articles
Advertisement