Advertisement

ಪರೇಶ್ ಪ್ರಕರಣ; ನಾಳೆ, ನಾಡಿದ್ದು ರಾಜ್ಯಾದ್ಯಂತ ವಿಎಚ್ ಪಿ ಪ್ರತಿಭಟನೆ

02:38 PM Dec 12, 2017 | Sharanya Alva |

ಉಡುಪಿ: ಹೊನ್ನಾವರದಲ್ಲಿ ಪರೇಶ್ ಮೇಸ್ತ ಅನುಮಾನಾಸ್ಪದ ಸಾವು ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆಗಾಗಿ ಆಗ್ರಹಿಸಿ ಹಾಗೂ ಹೊನ್ನಾವರದ ಗುಡ್ ಲಕ್ ಹೋಟೆಲ್ ಓನರ್ ಆಜಾದ್ ಅಣ್ಣಿಗೆರೆಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಬುಧವಾರ ಮತ್ತು ಗುರುವಾರ ರಾಜ್ಯಾದ್ಯಂತ ವಿಶ್ವಹಿಂದೂ ಪರಿಷತ್ ಪ್ರತಿಭಟನೆ ನಡೆಸಲಿದೆ ಎಂದು ವಿಎಚ್ ಪಿ ಮುಖಂಡ ವಿ.ಗೋಪಾಲ್ ತಿಳಿಸಿದ್ದಾರೆ.

Advertisement

ಹೊನ್ನಾವರದಲ್ಲಿ ಪರೇಶ್ ಮೇಸ್ತನ ಸಾವಿನ ತನಿಖೆಯನ್ನು ರಾಜ್ಯ ಸರ್ಕಾರ ನಿಷ್ಪಕ್ಷಪಾತವಾಗಿ ಮಾಡುವ ಭರವಸೆ ಇಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂಬ ಒತ್ತಾಯದೊಂದಿಗೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ವಿಎಚ್ ಪಿ ಹಿಂದೂ ಸಂಘಟನೆಗಳ ಜತೆ ಸೇರಿಕೊಂಡು 2 ದಿನಗಳ ಕಾಲ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಬಳಿಕ ರಾಜ್ಯಪಾಲರಿಗೆ ಮನವಿಯನ್ನು ನೀಡಲಾಗುವುದು ಎಂದು ಗೋಪಾಲ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಹೊನ್ನಾವರದ ಗುಡ್ ಲಕ್ ಹೋಟೆಲ್ ಮಾಲೀಕ ಆಜಾದ್ ಅಣ್ಣಿಗೆರೆ ಕೆಲವರಿಗೆ ಕುಮ್ಮಕ್ಕು ನೀಡುತ್ತಿದ್ದು, ಕೂಡಲೇ ಬಂಧಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next