Advertisement
ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಸುವರ್ಣ ಸಂಗಮದ ಅಂಗವಾಗಿ9 ದಿನಗಳ ಕಾಲ ನಡೆಯುವ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಹೆಚ್ಚು ಧಾರ್ಮಿಕ ಭಾವನೆಯುಳ್ಳ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ ನಡೆಯುವ ಜಿಲ್ಲೆ ಉಡುಪಿ. ಈ ಗಣೇಶೋತ್ಸವ ಸಮಿತಿ ಸಾರ್ವಜನಿಕ ಉದ್ಯಾನವನ ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದು, ಮನವಿ ಕೊಟ್ಟಲ್ಲಿ ಸ್ಥಳ ಒದಗಿಸಲು ಪ್ರಯತ್ನಿಸುವ ಭರವಸೆ ನೀಡಿದರು. ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಪತಿ ಡಾ| ಎಚ್.ಎಸ್. ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಗರಸಭೆ ಸದಸ್ಯೆ ಸುಮಿತ್ರಾ ನಾಯಕ್, ಮಂಗಳೂರು ಕೆಎಂಎಫ್ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ, ಕೈಗಾರಿಕೋದ್ಯಮಿ ಕೆ. ಬಾಲಕೃಷ್ಣ ಶೆಣೈ, ಸುವರ್ಣ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶ್ರೀನಿವಾಸ ಉಪಾಧ್ಯ, ಪಿ. ಬಾಲಕೃಷ್ಣ ನಾಯಕ್, ದಿನೇಶ ಶೆಟ್ಟಿ ಹೆರ್ಗ, ಸಂಚಾಲಕ ದೀಲಿಪ್ರಾಜ್ ಹೆಗ್ಡೆ, ಉಪಾಧ್ಯಕ್ಷ ಸುರೇಶ್ ಶಾನುಭಾಗ್ ಉಪಸ್ಥಿತರಿದ್ದರು.
Related Articles
Advertisement
ಇಂದು ಪರ್ಕಳಕ್ಕೆ ತಿಲಕ್ ಮೊಮ್ಮಗಬಾಲಗಂಗಾಧರ ತಿಲಕ್ ಅವರ ಮೊಮ್ಮಗ ಪುಣೆ ತಿಲಕ್ ಮಹಾರಾಷ್ಟ್ರ ವಿದ್ಯಾಪೀಠದ ಕುಲಪತಿ ಡಾ| ದೀಪಕ್ ಜೆ. ತಿಲಕ್ ಅವರು ಆ. 27ರ ಸಂಜೆ 5.30ಕ್ಕೆ ಪಾಲ್ಗೊಂಡು ಮಾತನಾಡುವರು.