Advertisement

Parliament Security Breach Case; ಆರನೇ ಆರೋಪಿಯನ್ನು ಬಂಧಿಸಿದ ದಿಲ್ಲಿ ಪೊಲೀಸರು

03:51 PM Dec 16, 2023 | Team Udayavani |

ಹೊಸದಿಲ್ಲಿ: ಭಾರತೀಯ ಸಂಸತ್ ಭವನದಲ್ಲಿ ಕಳೆದ ಬುಧವಾರ ನಡೆದ ಭದ್ರತಾ ಲೋಪ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ದಿಲ್ಲಿ ಪೊಲೀಸರು ಈ ಪ್ರಕರಣದ ಆರನೇ ಆರೋಪಿಯನ್ನು ಬಂಧಿಸಿದ್ದು, ಆತನನ್ನು ಮಹೇಶ್ ಕುಮಾವತ್ ಎಂದು ಗುರುತಿಸಲಾಗಿದೆ.

Advertisement

ಈತ ರಾಜಸ್ಥಾನದ ನಾಗೌರ್ ಜಿಲ್ಲೆಯ ನಿವಾಸಿಯಾಗಿದ್ದು, ಡಿಸೆಂಬರ್ 13ರಂದು ಈತನೂ ದೆಹಲಿಗೆ ಆಗಮಿಸಿದ್ದ. ಅವರು ಸಂಪೂರ್ಣ ಪಿತೂರಿಯ ಭಾಗವಾಗಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ ನಂತರ ಶನಿವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್ 13ರಂದು ದೆಹಲಿಯಲ್ಲಿರುವ ಸಂಸತ್ ಭವನದ ಲೋಕಸಭೆ ಕಲಾಪಕ್ಕೆ ನುಗ್ಗಿದ್ದ ಇಬ್ಬರು ಹಳದಿ ಹೊಗೆ ಬಾಂಬ್ ಸಿಡಿಸಿದ್ದರು. ಪ್ರೇಕ್ಷಕರ ಗ್ಯಾಲರಿಯಿಂದ ಸಂಸದರಿದ್ದೆಡೆ ಅವರು ಜಿಗಿದಿದ್ದರು.

ಘಟನೆಯ ನಂತರ ಪ್ರಮುಖ ಸಂಚುಕೋರ ಲಲಿತ್ ಝಾ ದೆಹಲಿಯಿಂದ ಪರಾರಿಯಾಗಿದ್ದ ರಾಜಸ್ಥಾನದಲ್ಲಿ ಮಹೇಶ್ ಅಡಗುತಾಣವಾಗಿತ್ತು. ಆರಂಭದಲ್ಲಿ ಬಂಧಿತ ನಾಲ್ವರು ಆರೋಪಿಗಳ ಮೊಬೈಲ್ ಫೋನ್ ಗಳನ್ನು ನಾಶಪಡಿಸುವಲ್ಲಿ ಮಹೇಶ್ ಕೂಡ ಲಲಿತ್ ಜೊತೆ ಸೇರಿಕೊಂಡಿದ್ದ.

ಮಹೇಶ್ ಅವರು ನೀಲಮ್ ದೇವಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು, ಅವರ ಗುಂಪಿನ ಸದಸ್ಯರು ಲೋಕಸಭೆಗೆ ಪ್ರವೇಶಿಸಿದಾಗ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದಾಗ ಬಂಧಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next