Advertisement

Parliament ಹೊಗೆ ಬಾಂಬ್‌ ಕೇಸ್‌: ಕೋಟ್‌ಗೆ ಪೂರಕ ಆರೋಪ ಪಟ್ಟಿ ಸಲ್ಲಿಕೆ

01:11 AM Jul 16, 2024 | Team Udayavani |

ಹೊಸದಿಲ್ಲಿ: ಸಂಸತ್‌ ಭವನದಲ್ಲಿ ಹೊಗೆ ಬಾಂಬ್‌ ದಾಳಿ ಪ್ರಕರಣ ಸಂಬಂಧ ದಿಲ್ಲಿ ಪೊಲೀಸರು ಸೋಮವಾರ ಸ್ಥಳೀಯ ಕೋರ್ಟ್‌ಗೆ ಪೂರಕ ಆರೋಪಪಟ್ಟಿ ಸಲ್ಲಿಸಿದ್ದಾರೆ. ಬಂಧಿತರಾಗಿರುವ ಮೈಸೂರಿನ ಮನೋರಂಜನ್‌, ಲಲಿತ್‌ ಝಾ, ಅಮೋಲ್‌ ಶಿಂಧೆ ಸೇರಿ 6 ಮಂದಿಯ ವಿರುದ್ಧ ಯುಎಪಿಎ ಅನ್ವಯ ಕ್ರಮ ಕೈಗೊಳ್ಳಲು ಪೊಲೀಸರು ಕೋರ್ಟ್‌ನಿಂದ ಅನುಮತಿಯನ್ನೂ ಪಡೆದುಕೊಂಡಿದ್ದಾರೆ. ಇದರ ಜತೆಗೆ ವಿಧಿ ವಿಜ್ಞಾನ ಪ್ರಯೋಗಶಾಲೆಯಿಂದ ಕೆಲವೊಂದು ವರದಿಗಳು ಪೊಲೀಸರಿಗೆ ಸಿಗಬೇಕಾಗಿದೆ ಎಂದು ಪಬ್ಲಿಕ್‌ ಪ್ರಾಸಿಕ್ಯೂಟರ್‌ ತಿಳಿಸಿದ್ದಾರೆ.

Advertisement

ಜೂ.7ರಂದು ಪೊಲೀಸರು 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದರು. ಈ ನಡುವೆ ಬಂಧಿತರ ನ್ಯಾಯಾಂಗ ಬಂಧನ ಅವಧಿಯನ್ನು ಆ.2ರ ವರೆಗೆ ವಿಸ್ತರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next