Advertisement

Parliment: ಲೋಕಸಭೆ ಸಚೇತಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

01:10 AM Jul 30, 2024 | Team Udayavani |

ಉಡುಪಿ: ಬಿಜೆಪಿಯ ಸಂಸದೀಯ ಮಂಡಳಿಯು ಲೋಕಸಭೆಯ ಮುಖ್ಯ ಸಚೇತಕ ಹಾಗೂ ಸಚೇತಕರನ್ನು ನೇಮಿಸಿದ್ದು, ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಮಂದಿ ಸಚೇತಕರನ್ನಾಗಿ ನೇಮಿಸಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಸೋಮವಾರ (ಜುಲೈ 29) ಆದೇಶ ಹೊರಡಿಸಿದ್ದಾರೆ.

Advertisement

ಡಾ ಸಂಜಯ್ ಜೈಸ್ವಾಲ್ ರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರಾಗಿ ನೇಮಿಸಲಾಗಿದೆ. ಇನ್ನು ಈ 16 ಜನರ ಸಚೇತಕರ ಪೈಕಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಾನ ಸಿಕ್ಕಿದೆ.  ಕೋಟ ಶ್ರೀನಿವಾಸ ಪೂಜಾರಿಯವರು ಮೊದಲ ಬಾರಿಗೆ ಸಂಸತ್‌ ಸದಸ್ಯರಾಗಿದ್ದು, ಅವರನ್ನು ಸಚೇತಕರನ್ನಾಗಿ ನೇಮಿಸಿದ್ದು ವಿಶೇಷ. ಕರ್ನಾಟಕದಿಂದ ಬೇರೆ ಯಾರನ್ನೂ ನೇಮಿಸಿಲ್ಲ.

ಇನ್ನು ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟ ಶ್ರೀನಿವಾಸ್ ಪೂಜಾರಿ ಧನ್ಯವಾದ ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next