Advertisement

High Court ಪರೋಲ್‌ ನಿಯಮ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

12:27 AM Jun 27, 2024 | Team Udayavani |

ಬೆಂಗಳೂರು: ಅಪರಾಧಿಗಳು ಜೈಲುಗಳಲ್ಲಿ ಎಸಗುವ ತಪ್ಪುಗಳಿಗೆ ಅಲ್ಲಿ ನೀಡಲಾಗುವ ಶಿಕ್ಷೆಗಳನ್ನು ಆಕ್ಷೇಪಿಸಿ ಹಾಗೂ ಅಪರಾಧಿಗಳ ಜಾಮೀನು ಅರ್ಜಿ ಅಥವಾ ಮೇಲ್ಮನವಿ ವಿಚಾರಣೆಗೆ ಬಾಕಿ ಇದ್ದಾಗ ಅವರ ಪರೋಲ್‌ ಮನವಿ ಪರಿಗಣಿಸಬಾರದು ಎಂಬ ನಿಯಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಗೊಳಿಸಿದೆ.

Advertisement

ಈ ವಿಚಾರವಾಗಿ ಹೈಕೋರ್ಟ್‌ನ ಕಾನೂನು ಸೇವಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಅರ್ಜಿ ಆಲಿಸಿದ ನ್ಯಾಯಪೀಠ, ಸರಕಾರ, ಗೃಹ ಇಲಾಖೆ, ಕಾರಾಗೃಹ ಇಲಾಖೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next