Advertisement

ಚಿಕಿತ್ಸೆಗಾಗಿ ಪರ್ರಿಕರ್‌ ಮುಂಬಯಿಗೆ; ಅಗತ್ಯಬಿದ್ದರೆ ವಿದೇಶಕ್ಕೆ

08:15 AM Mar 06, 2018 | Team Udayavani |

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌ ಸೋಮವಾರ ಆರೋಗ್ಯ ತಪಾಸಣೆಗಾಗಿ ಮುಂಬಯಿಗೆ ತೆರಳಿದ್ದಾರೆ. ಅಗತ್ಯಬಿದ್ದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಪ್ರಯಾಣಿಸುವ ಸಾಧ್ಯತೆಯೂ ಇದೆ ಎಂದು ಅವರ ಕಚೇರಿ ತಿಳಿಸಿದೆ. ಮುಂಬಯಿಗೆ ತೆರಳುವುದಕ್ಕೂ ಮೊದಲು ಅವರು ತಮ್ಮ ಖಾಸಗಿ ನಿವಾಸದಲ್ಲಿ ಸಂಪುಟದ ಹಿರಿಯ ಸಚಿವರ ಸಭೆ ಕರೆದು, ತಮ್ಮ ಅನುಪಸ್ಥಿತಿಯಲ್ಲಿ ಕೈಗೊಳ್ಳಬೇಕಿರುವ ಕೆಲಸಗಳ ಕುರಿತು ವಿವರಿಸಿದ್ದಾರೆ. ಜತೆಗೆ, ಸಂಪುಟ ಸಲಹಾ ಸಮಿತಿಯೊಂದನ್ನು ರಚಿಸಿದ್ದಾರೆ ಎನ್ನಲಾಗಿದೆ. 

Advertisement

ಪಾರೀಕರ್‌ ಫೆ.15ರಂದು ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಫೆ. 25ರಂದು ನಿರ್ಜಲೀಕರಣದಿಂದ ಬಳಲಿ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next