Advertisement

ಎಸ್‌ಎಸ್‌ಸಿ ಹಗರಣ: ಪಾರ್ಥ, ಅರ್ಪಿತಾಗೆ 14 ದಿನಗಳ ನ್ಯಾಯಾಂಗ ಬಂಧನ

08:35 PM Aug 05, 2022 | Team Udayavani |

ಕೋಲ್ಕತಾ: ಎಸ್‌ಎಸ್‌ಸಿ ಹಗರಣ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ವಿಶೇಷ ನ್ಯಾಯಾಲಯ ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

Advertisement

ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ನ್ಯಾಯಾಧೀಶ ಜಿಬೋನ್ ಕುಮಾರ್ ಸಾಧು ಅವರು ಜಾರಿ ನಿರ್ದೇಶನಾಲಯದ (ಇಡಿ) ಕೋರಿಕೆಯ ಮೇರೆಗೆ ಚಟರ್ಜಿ ಮತ್ತು ಮುಖರ್ಜಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು.

ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಆಗಸ್ಟ್ 18 ರಂದು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದಾಗ ಇಬ್ಬರೂ ಆರೋಪಿಗಳನ್ನು ಹಾಜರುಪಡಿಸುವಂತೆ ಸೂಚಿಸಿದೆ.

ಇಬ್ಬರು ಆರೋಪಿಗಳಿಂದ ಇಡಿ ಅಪಾರ ಪ್ರಮಾಣದ ನಗದು, ಚಿನ್ನ, ಆಸ್ತಿ, ಬ್ಯಾಂಕ್ ಖಾತೆಗಳು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಳ್ಳುವುದರೊಂದಿಗೆ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಮತ್ತು ತನಿಖೆ ಆರಂಭಿಕ ಹಂತದಲ್ಲಿದೆ ಎಂದು ಗಮನಿಸಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next