Advertisement

ಡಿಕೆಶಿ ನಾಯಕತ್ವದಲ್ಲಿ ಪಕ್ಷ ಸಂಘಟನೆ

05:12 AM Jul 03, 2020 | Lakshmi GovindaRaj |

ಹನೂರು: ಕೆಪಿಸಿಸಿ ನೂತನ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ನಾಯಕ್ವದಲ್ಲಿ ಪಕ್ಷದ ಮುಖಂಡರು ಮತ್ತು ಪ್ರತಿಯೊಬ್ಬರೂ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಬೇಕು ಎಂದು ಜಿಪಂ ಸದಸ್ಯ ಬಸವರಾಜು ಮನವಿ ಮಾಡಿದರು. ತಾಲೂಕಿನ  ರಾಮಾಪುರದಲ್ಲಿ ಏರ್ಪಡಿಸಿದ್ದ ಡಿ.ಕೆ. ಶಿವಕುಮಾರ್‌ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.

Advertisement

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ರನ್ನು ಆಯ್ಕೆ ಮಾಡಿರುವುದು ಮುಖಂಡರು ಮತ್ತು ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಳಿಸಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಸ್ತುವಾರಿಗಳಾದ ಸುಹೇಲ್‌ ಅಲಿಖಾನ್‌, ನರೇಂದ್ರ, ತಾಪಂ ಸದಸ್ಯ ರಾಜೇಂದ್ರ, ನಟರಾಜು, ಮುಖಂಡರಾದ ಪೆದ್ದನಪಾಳ್ಯ ಮಣಿ, ಯುವ ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾದೇಶ್‌, ಮಹೇಶ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next