Advertisement

ಪಾರ್ವತಮ್ಮ ಚೇತರಿಕೆ: ವದಂತಿಗಳಿಗೆ ಕಿವಿಗೊಡಬೇಡಿ

11:42 AM May 28, 2017 | Harsha Rao |

ಬೆಂಗಳೂರು: ಬಹು ಅಂಗಾಂಗ ವೈಫ‌ಲ್ಯದಿಂದ ನಗರದ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿರ್ಮಾಪಕಿ ಡಾ. ಪಾರ್ವತಮ್ಮ ರಾಜ್‌ಕುಮಾರ್‌ ಅವರ ಆರೋಗ್ಯದಲ್ಲಿ ಶನಿವಾರ ಸ್ವಲ್ಪ ಚೇತರಿಕೆ ಕಂಡಿದೆ. 15 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಉಸಿರಾಟದ ಸಮಸ್ಯೆ ಇರುವುದರಿಂದ ವೆಂಟಿಲೇಟರ್‌ ಮೂಲಕ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ.

Advertisement

ತೀವ್ರನಿಗಾ ಘಟಕದಲ್ಲೇ ಚಿಕಿತ್ಸೆ ಮುಂದುವರಿಯುತ್ತಿದ್ದು, ಮಾತನಾಡಲು ಪ್ರಯತ್ನಿಸುತ್ತಿದ್ದಾರೆ. ರಕ್ತದೊತ್ತಡ ಹಾಗೂ ಸಕ್ಕರೆ ಪ್ರಮಾಣ ನಿಯಮಿತವಾಗಿದೆ. ನಿತ್ಯವೂ ಡಯಾಲಿಸಿಸ್‌ ಮಾಡಲಾಗುತ್ತಿದೆ. ಕಳೆದೆರೆಡು ದಿನಕ್ಕೆ ಹೋಲಿಸಿದರೆ ಶನಿವಾರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡಿದೆ ಎಂದು ಆಸ್ಪತ್ರೆಯ ವೈದ್ಯ ಡಾ.ಸಂಜಯ್‌ ಕುಲಕರ್ಣಿ ಹೇಳಿದರು.

“ಅಮ್ಮನ ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಚೇತರಿಕೆ ಕಂಡುಬಂದಿದ್ದು, ಮಾತನಾಡಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಎಲ್ಲ ರೀತಿಯ ಚಿಕಿತ್ಸೆಯನ್ನು ವೈದ್ಯರು ನೀಡುತ್ತಿದ್ದಾರೆ. ಅಲ್ಲದೆ, ಶುಕ್ರವಾರ ಕಾಣಿಸಿಕೊಂಡಿದ್ದ ಜ್ವರದಿಂದ ಗುಣಮುಖರಾಗಿದ್ದಾರೆ. ವೈದ್ಯಕೀಯ ಭಾಷೆಯನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಕೆಲವರು ಸಾರ್ವಜನಿಕವಾಗಿ ಆತಂಕ ಮೂಡಿಸುತ್ತಿದ್ದಾರೆ. ಇದನ್ನು ನಂಬಬೇಡಿ’ ಎಂದು ನಟ ಶಿವರಾಜ್‌ ಕುಮಾರ್‌ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next