Advertisement

Derails: ನಿಲ್ದಾಣ ತಲುಪುತ್ತಿದ್ದಂತೆ ಹಳಿತಪ್ಪಿದ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲು…

12:17 PM Jan 10, 2024 | Team Udayavani |

ಹೈದರಾಬಾದ್‌: ಚೆನ್ನೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲು ಹೈದರಾಬಾದ್‌ನ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಬುಧವಾರ ಹಳಿತಪ್ಪಿದೆ.

Advertisement

ಬೆಳಗ್ಗೆ 9:15ರ ಸುಮಾರಿಗೆ ಈ ಘಟನೆ ನಡೆದಿದೆ. ಮೂರು ಬೋಗಿಗಳು ಹಳಿತಪ್ಪಿದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಹಳಿ ತಪ್ಪಲು ಕಾರಣವೇನು ಎಂಬುದು ತಿಳಿದು ಬಂದಿಲ್ಲ. ನಿಲ್ದಾಣದಲ್ಲೇ ಹಳಿ ತಪ್ಪಿದ ಪರಿಣಾಮ ರೈಲು ನಿಧಾನವಾಗಿ ಸಂಚರಿಸುತ್ತಿತ್ತು ಎಂದು ಹೇಳಲಾಗಿದ್ದು ಇದರಿಂದ ಸಂಭವನೀಯ ಅವಘಡ ತಪ್ಪಿದಂತಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಳಿ ತಪ್ಪಿದ ಕುರಿತು ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಗಾಯಾಳುಗಳಿಗೆ ರೈಲ್ವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವೈದ್ಯರ ನಿರ್ಲಕ್ಷ… ಕೊರೆವ ಚಳಿಯಲ್ಲಿ ತರಕಾರಿ ಗಾಡಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

Advertisement
Advertisement

Udayavani is now on Telegram. Click here to join our channel and stay updated with the latest news.

Next