Advertisement
ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಕನಕದಾಸರ ಜಯಂತ್ಯುತ್ಸವದಲ್ಲಿ ಭಾಗ ವಹಿಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದನ್ನು ಸ್ವಾಗತಿಸಿದ ಮಾಜಿ ಸಿಎಂ, ಬಿಜೆಪಿ ನಾಯಕರು ಏನೇ ತಂತ್ರಗಾರಿಕೆ ನಡೆಸಿದರೂ ಸಮ್ಮಿಶ್ರ ಸರ್ಕಾರಕ್ಕೆ ಏನು ದಕ್ಕೆಯಾಗುವುದಿಲ್ಲ. ಅವರ ತಂತ್ರ, ಪ್ರತಿತಂತ್ರಗಳು ಅವರ ಕನಸು ಈಡೇರುವುದಿಲ್ಲ. ಅವರ ಭ್ರಮೆಗಳು ಕೂಡ ಭ್ರಮೆಯಾಗಿಯೇ ಉಳಿಯುತ್ತವೆ ಎಂದು ಹೇಳಿದರು.
Related Articles
Advertisement
ಜಾತಿ ಕಾರಣಕ್ಕೆ ನನ್ನನ್ನು ಸೋಲಿಸಿದ್ರು: ಮಾಜಿ ಸಿಎಂಚಿಕ್ಕಬಳ್ಳಾಪುರ: ಚುನಾವಣೆಯಲ್ಲಿ ತನ್ನನ್ನು ಸೋಲಿಸಲು ಜಾತಿ ವಿರೋಧಿ ಪಟ್ಟ ಕಟ್ಟಿದರು. ನಾನು ಯಾರಿಗೆ ಕೆಲಸ ಮಾಡಿಕೊಟ್ಟೆ ಅವರು ಕೂಡ ತನ್ನ ಕೈ ಹಿಡಿಯಲಿಲ್ಲ. 4 ಕೋಟಿ ಬಡವರಿಗೆ ಅನ್ನಭಾಗ್ಯ ರೂಪಿಸಿದೆ. ಅದರಲ್ಲಿ ಎಲ್ಲಾ ಜಾತಿ ಬಡವರು ಇದ್ದಾರೆ. ನಾನು ಯಾವ ಜಾತಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಅವಲೋಕನ ಮಾಡಿಕೊಂಡರು. ನಗರದಲ್ಲಿ ಗುರುವಾರ ನಡೆದ ಕನಕದಾಸರ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 1.22 ಕೋಟಿ ಮಕ್ಕಳಿಗೆ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ರೈತರಿಗೆ ಸಾಲ ಮನ್ನಾ ಮಾಡಿದೆ. ಬರೀ ಅಹಿಂದ ವರ್ಗದವರು ಮಾತ್ರ ಇದ್ದರಾ? ನಾನು ಬಡವರ ಪರ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಕೆಲವರಿಗೆ ಹೊಟ್ಟೆಕಿಚ್ಚು, ಅಸೂಯೆ, ಹೊಟ್ಟೆ ಉರಿ ಬಂದು ಬಿಡಿತು ಎಂದು ತಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದರು. ಈ ದೇಶದ ಇತಿಹಾಸದಲ್ಲಿ ಬದಲಾವಣೆ ಬಯಸುವ ಯಾರೇ ಆಗಲಿ ಅವರನ್ನು ತುಳಿಯುವುದೇ ಪಟ್ಟಭದ್ರ ಹಿತಾಸಕ್ತಿಗಳ ಕೆಲಸವಾಗಿದೆ. ಸಿದ್ದರಾಮಯ್ಯ ಬ್ರಾಹ್ಮಣರ ವಿರೋಧಿ, ಲಿಂಗಾಯಿತರ ವಿರೋಧಿ, ಒಕ್ಕಲಿಗರ ವಿರೋಧಿಯೆಂದು ಸುಮ್ಮು ಸುಮ್ನನೆ ಅಪಪ್ರಚಾರ ಮಾಡಿ ತನ್ನನ್ನು ಸೋಲಿಸಲು ಎಲ್ಲಾರೂ ಒಂದಾದರೆಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮಗೆ ಆದ ಸೋಲಿನ ನೋವನ್ನು ಸಭೆಯಲ್ಲಿ ತೋಡಿಕೊಂಡರು. ಶಾಸಕ ಡಾ.ಕೆ.ಸುಧಾಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಎಂ.ವೀರಪ್ಪ ಮೊಯ್ಲಿ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಶಾಸಕರಾದ ಮುನಿರತ್ನಂ, ಬೈರತಿ ಬಸವರಾಜ್, ಜಿಲ್ಲಾ ಪಂಚಾಯ್ತಿ ಸದಸ್ಯ ಪಿ.ಎನ್.ಕೇಶವರೆಡ್ಡಿ, ಕೋಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್, ನಗರಸಭೆ ಅಧ್ಯಕ್ಷ ಮುನಿಕೃಷ್ಣ, ತಾಲೂಕು ಪಂಚಾಯ್ತಿ ಅಧ್ಯಕ್ಷ ರಾಮುಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.