Advertisement

ಪಾಟೀಲ ಗೆಲ್ಲಿಸಿ ಪಕ್ಷ ಬಲಪಡಿಸಲು ಶ್ರಮಿಸಿ: ಸಿದ್ದಾಜಿ

10:28 AM Dec 06, 2021 | Team Udayavani |

ಕಲಬುರಗಿ: ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಬೇಕೆಂದು ಪಕ್ಷದ ನಗರಾಧ್ಯಕ್ಷ ಸಿದ್ಧಾಜಿ ಪಾಟೀಲ ಕರೆ ನೀಡಿದರು.

Advertisement

ನಗರದ ಸಂಗಮೇಶ್ವರ ಕಾಲೋನಿಯಲ್ಲಿರುವ ಯಜ್ಞವಲ್ಕ ಸಭಾಗಂಣದಲ್ಲಿ ಬಿಜೆಪಿ ದಕ್ಷಿಣ ಮಂಡಲ ಕಾರ್ಯಕಾರಿಣಿ ಸಭೆಯನ್ನು ಭಾರತಮಾತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಚಾಲನೆ ನೀಡಿ ಅವರು ಮಾತನಾಡಿದರು.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್‌ ಮಾತನಾಡಿ, ಪ್ರಸ್ತುತ ನಡೆಯುತ್ತಿರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾದ ಬಿ.ಜಿ.ಪಾಟೀಲ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮ ವಹಿಸಬೇಕಾಗಿದೆ ಎಂದರು.

ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಸಾಲಿಮಠ ಮಾತನಾಡಿ, ಕಳೆದ ಮೂರು ತಿಂಗಳಲ್ಲಿ ನಡೆದ ಪಕ್ಷದ ಕಾರ್ಯ ಕ್ರಮಗಳನ್ನು ವಿವರಿಸಿದರು. ದಕ್ಷಿಣ ಮಂಡಲದ ಅಧ್ಯಕ್ಷ ರಾಮಚಂದ್ರ ಗುಮ್ಮಟ್‌ ಸ್ವಾಗತ ಭಾಷಣ ಮಾಡಿದರು. ಕಾರ್ಯಕಾರಿಣಿ ಆರಂಭಕ್ಕೂ ಮುಂಚೆ ಇತ್ತೀಚೆಗೆ ನಿಧನರಾದ ಕರ್ನಾಟಕ ರತ್ನ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ ಹಾಗೂ ಹಿರಿಯ ನಟ ಶಿವರಾಮ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮುಖಂಡರಾದ ಮಹದೇವ ಬೆಳ ಮಗಿ, ಸುರಜ ಪ್ರಸಾದ ತಿವಾರಿ, ವಿಶ್ವನಾಥ ಸಾಲಿಮಠ, ಸತೀಶ ಜಮಖಂಡಿ, ರಂಜಿತ್‌ ಮೂಲಿಮನಿ, ಮಹಾನಗರ ಪಾಲಿಕೆ ಸದಸ್ಯರಾದ ವಿಶಾಲ ದರ್ಗಿ, ಮಲ್ಲು ಉದನೂರು, ವೀರಣ್ಣ ಹೊನ್ನಳ್ಳಿ, ಶಂಭು ಬಳಬಟ್ಟಿ, ಗುರು ಪಟ್ಟಣ, ಮೋರ್ಚಾ ಅಧ್ಯಕ್ಷೆ ಶೋಭಾ ಪಾಟೀಲ ಬಾಗೆವಾಡಿ, ವಿಜಯಲಕ್ಷ್ಮೀ ಗೊಬ್ಬುರ, ಮಹಾದೇವಿ, ಆರತಿ ತಿವಾರಿ, ಸತೀಶ ಜಮಖಂಡಿ, ರಂಜಿತ ಮೂಲಿಮನಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next