Advertisement

ಪಾವಗಡ ಬಸ್ ಅಪಘಾತ: 25 ಲಕ್ಷ ರೂ. ಪರಿಹಾರಕ್ಕೆ ಖಾದರ್ ಆಗ್ರಹ 

03:37 PM Mar 21, 2022 | Team Udayavani |

ಬೆಂಗಳೂರು: ಪಾವಗಡ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ವಿಧಾನಸಭೆ ಉಪ ನಾಯಕ ಯು.ಟಿ ಖಾದರ್ ಆಗ್ರಹಿಸಿದ್ದಾರೆ.

Advertisement

ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಯನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು. ಘಟನೆಯ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ಖಾಸಗಿ ಬಸ್ ಲೈಸೆನ್ಸ್ ರದ್ದು ಮಾಡಲಾಗುವುದು ಎಂದಿದ್ದಾರೆ. ಆದರೆ  ಬಸ್ ಟಾಪ್ ಮೇಲೆ ಕುಳಿತುಕೊಂಡರೆ ಕೇಸ್ ಹಾಕುತ್ತೇವೆ ಎಂದು ಸಿಎಂ ಹೇಳಿಕೆ ನೀಡುತ್ತಾರೆ. 80 ಕ್ಕೂ ಸರ್ಕಾರಿ ಬಸ್ ಈ ಹಿಂದೆ ರೂಟ್ ನ ಲ್ಲಿ ಪ್ರಯಾಣ ಮಾಡುತ್ತಿದ್ದವು. ಇವಾಗ 30-40 ಸರ್ಕಾರಿ ಬಸ್ ಮಾತ್ರ ಓಡಾಡುತ್ತಿದೆ. ಆದರೆ 150 ಕ್ಕೂ ಹೆಚ್ಚು ಖಾಸಗಿ ಬಸ್ ಓಡಾಡುತ್ತಿದೆ ಎಂದು ತಿಳಿಸಿದರು.

ಜನಸಾಮಾನ್ಯರಿಗೆ ಸರಿಯಾದ ಸಾರಿಗೆ ಸೌಲಭ್ಯ ಕೊಡದಿರುವುದು ಟಾಪ್ ನಲ್ಲಿ ಪ್ರಯಾಣ ಮಾಡಬೇಕಾದ ಸ್ಥಿತಿ ನಿರ್ಮಾನವಾಗಿದೆ. ಈ ನಿಟ್ಟಿನಲ್ಲಿ ಉನ್ನತ ಮಟ್ಟ ಸಮಿತಿ ರಚನೆ ಮಾಡಿ ವಿವರ ಪಡೆದುಕೊಳ್ಳಬೇಕು . ಜೊತೆಗೆ ಮೃತರ ಕುಟುಂಬಕ್ಕೆ  25 ಲಕ್ಷ,  ಗಾಯಾಳುಗಳಿಗೆ 10 ಲಕ್ಷ, ಸಣ್ಣ ಪ್ರಮಾಣದ ಗಾಯಾಳುಗಳಿಗೆ ಐದು ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಅಪಘಾತ ನಡೆದ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಹೋಗಬೇಕಿತ್ತು.ಆದರೆ ಸಿಎಂ ಆರ್ ಆರ್ ಆರ್ ಸಿನಿಮಾ ಟ್ರೇಲರ್ ರಿಲೀಸ್ ಗೆ ಹೋಗಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಸಚಿವ ಶ್ರೀರಾಮುಲು ಉತ್ತರಿಸಿ, ಅಪಘಾತದ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳನ್ನು ಕಳಿಸಿದ್ದೆ. ಪ್ರೈವೇಟ್ ಬಸ್ ಅಲ್ಲಿ ಓಡಾಡುತ್ತಿದ್ದವು. ಎರಡು ದಿನ ಮೊದಲು ಅಲ್ಲೊಂದು ಅಪಘಾತವಾಗಿ ಬಸ್‌ಗಳನ್ನು ಸ್ಟೇಷನ್‌ನಲ್ಲಿ ನಿಲ್ಲಿಸಲಾಗಿತ್ತು. ವಿದ್ಯಾರ್ಥಿಗಳ‌ ಸಂಖ್ಯೆಯೂ ಹೆಚ್ಚಾಗಿತ್ತು. ಅಪಘಾತ ಆಗುತ್ತಿರುವ ಸ್ಥಳವನ್ನು ಬ್ಲ್ಯಾಕ್ ಸ್ಟಾಟ್ ಅಂತ ಪರಿಗಣಿಸಲಾಗುವುದು.ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ಅಪಘಾತಕ್ಕೆ ಯಾರು ಕಾರಣ ಅಂತ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

Advertisement

ಸರ್ಕಾರದಿಂದ ಐದು ಲಕ್ಷ ಪರಿಹಾರ ಜೊತೆಯಲ್ಲಿ ವಯಕ್ತಿಕವಾಗಿ ನಾನು ಒಂದು ಲಕ್ಷ ನೀಡಿದ್ದೇನೆ. ಗಾಯಗೊಂಡವರಿಗೆ 50 ಸಾವಿರ  ಹಣ ನೀಡಲಾಗಿದೆ. ದುರಂತ ಆಗಿರೋ ಸ್ಥಳದಲ್ಲಿ ಕೂಡ ಸ್ಥಳೀಯರು ಹೇಳಿದ್ರು. ಸರ್ಕಾರಿ ಬಸ್ ಬಂದ ಬಳಿಕ ಅಪಘಾತ ಕಡಿಮೆ ಆಗಿತ್ತು, ಆದರೆ ಈಗ ಬಸ್ ಬರದಿರೋದೇ  ಅಪಘಾತಕ್ಕೆ ಕಾರಣ ಅಂದರು. ಕೂಡಲೇ ಅಧಿಕಾರಿಗಳಿಗೆ ಬಸ್ ಬಿಡುವಂತೆ ಸೂಚನೆ ನೀಡಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next