Advertisement

Pavagada: ಕಾರು ಅಪಘಾತ; ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

09:50 AM May 12, 2024 | Team Udayavani |

ಪಾವಗಡ: ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು ಮಾರ್ಗದ ಕಣಿವೆನಹಳ್ಳಿ ಗೇಟ್ ಬಳಿಯ ನಯಾರ ಪೆಟ್ರೋಲ್ ಬಂಕ್ ಸಮೀಪ ಮೇ. 11ರ ಶನಿವಾರ ಸಂಭವಿಸಿದೆ.

Advertisement

ಕಾರು ಅಪಘಾತದ ಪರಿಣಾಮ ಪಾವಗಡ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲ ಓ ಧನಂಜಯ ಮತ್ತು ಗೌಡೇಟಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಕೃಷ್ಣ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಇತರ ಶಿಕ್ಷಕರಾದ ಆರ್.ಎಂ.ನರಸಿಂಹ ಮತ್ತು ವೆಂಕಟಾಚಲಪತಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

ಈ ನಾಲ್ವರು ಶನಿವಾರ ರಾತ್ರಿ ತುಮಕೂರಿನಲ್ಲಿ ಶಿಕ್ಷಕಿ ಶೋಭಾ ಅವರ ಪುತ್ರಿಯ ವಿವಾಹದ ಆರಕ್ಷತೆ ಕಾರ್ಯಕ್ರಮ ಮುಗಿಸಿ ಮರಳಿ ಪಾವಗಡಕ್ಕೆ ಬರುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.

Advertisement

ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next