Advertisement

ಪಾವಗಡ: 3 ವರ್ಷಗಳ ಹಿಂದೆ ನಾಪತ್ತೆ; ಯುವಕ ಹತ್ಯೆಯಾಗಿರುವ ಸುಳಿವು

10:27 PM Sep 24, 2022 | Team Udayavani |

ಪಾವಗಡ: ಮೂರು ವರ್ಷಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯೊಬ್ಬರು ಹತ್ಯೆಯಾಗಿರುವ ಬಗ್ಗೆ ಪಟ್ಟಣ ಠಾಣೆ ಪೊಲೀಸರಿಗೆ ಸುಳಿವು ಸಿಕ್ಕಿದೆ.

Advertisement

ತಾಲೂಕಿನ ತಿಮ್ಮ ನಾಯಕನ ಪೇಟೆ ಗ್ರಾಮದ ನಾಗೇಂದ್ರ(26) 3 ವರ್ಷಗಳ ಹಿಂದೆ ನಾಪತ್ತೆಯಾಗಿದ್ದರು. ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಸದ್ಯ ಕಾಣೆಯಾಗಿರುವ ಯುವಕ ಹತ್ಯೆಯಾಗಿರುವ ಸುಳಿವು ಸಿಕ್ಕಿರುವ ಹಿನ್ನೆಲೆ ಅನುಮಾನಿತರನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ಪ್ರಗತಿಯಲ್ಲಿದ್ದು, ಪಟ್ಟಣ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಅಜಯ ಸಾರಥಿ ನೇತೃತ್ವದಲ್ಲಿ ವಿಶೇಷ ತಂಡ ಹತ್ಯೆ ಪ್ರಕರಣವನ್ನು ಭೇದಿಸಿದೆ. 3 ವರ್ಷಗಳ ನಂತರ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪೊಲೀಸ್ ಇಲಾಖೆ ಬಗ್ಗೆ ಶ್ಲಾಘನೆ ವ್ಯಕ್ತವಾಗುತ್ತಿದೆ.

3 ವರ್ಷವಾದರೂ ಕಾಣೆಯಾದ ದಲಿತ ಯುವಕನನ್ನು ಪತ್ತೆ ಹಚ್ಚಿಲ್ಲ ಎಂದು ದಲಿತ ಪರ ಸಂಘಟನೆಗಳ ಮುಖಂಡರು ಸಭೆಗಳಲ್ಲಿ ಬೇಸರ ವ್ಯಕ್ತಪಡಿಸಿದ್ದರು. ನಾಗೇಂದ್ರ ಪ್ರೀತಿಸುತ್ತಿದ್ದ ಯುವತಿಯ ಕಡೆಯವರು ಹತ್ಯೆ ಮಾಡಿರುವ ಅನುಮಾನಗಳಿದ್ದವು. ಇದೇ ಸುಳಿವನ್ನು ಆಧರಿಸಿ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next