Advertisement

ಪಾವಗಡ: ಕಾರು-ಆಟೋ ಅಪಘಾತ; ಬಾಲಕ ಸಾವು

11:42 AM Jan 16, 2023 | Team Udayavani |

ಪಾವಗಡ: ತಾಲೂಕಿನ ಟಿ.ಎನ್. ಪೇಟ್ ಬಳಿ ಭಾನುವಾರ (ಜ.15) ರಾತ್ರಿ ಆಟೋಗೆ ಇನ್ನೋವಾ ಕಾರು ಢಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಬಾಲಕ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ‌ ಸೋಮವಾರ (ಜ.16) ಬೆಳಿಗ್ಗೆ ಮೃತಪಟ್ಟಿದ್ದಾನೆ.

Advertisement

ಚಿತ್ರದುರ್ಗ ಜಿಲ್ಲೆಯ ಗೌರಿಪುರದ ಬಾಲಕ ವರ್ಷಿತ್ ರೆಡ್ಡಿ (13) ಮೃತಪಟ್ಟ ಬಾಲಕ.

ಗಂಭೀರ ಗಾಯಗೊಂಡಿದ್ದ ಬಾಲಕ ವರ್ಷಿತ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ‌ ಮೃತಪಟ್ಟಿದ್ದಾನೆ.

ತಾಲೂಕಿನ ಟಿ.ಎನ್. ಪೇಟೆ ಗ್ರಾಮದ ಬಳಿ ಭಾನುವಾರ ರಾತ್ರಿ ರೊದ್ದಂ ನಿಂದ ಪಾವಗಡ ಕಡೆಗೆ ಬರುತ್ತಿದ್ದ ಕಾರು, ಪ್ರಯಾಣಿಕರನ್ಜು ಇಳಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿಯಾಗಿ ಆಟೋದಲ್ಲಿದ್ದ ಸುಧಾ, ನಾರಾಯಣಮ್ಮ, ನಾರಾಯಣಪ್ಪ, ಭರತ್, ಜಶ್ವಂತ್ ಎಂಬವರಿಗೆ ಗಾಯಗಳಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next