Advertisement

ಊರಿನ ಸಮಸ್ಯೆ ಹೇಳಲು ಬಂದ ಯುವಕನಿಗೆ ಶಾಸಕರಿಂದ ಕಪಾಳಮೋಕ್ಷ : ಶಾಸಕರ ನಡೆಗೆ ಭಾರೀ ಆಕ್ರೋಶ

04:00 PM Apr 20, 2022 | Team Udayavani |

ಪಾವಗಡ: ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಮಂಗಳವಾರ ಯುವಕನೋರ್ವನಿಗೆ ಶಾಸಕ ವೆಂಕಟರಮಣಪ್ಪ ಅವರು ಕಪಾಳಕ್ಕೆ ಹೊಡೆದಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೊಶ ವ್ಯಕ್ತವಾಗುತ್ತಿದೆ.

Advertisement

ರಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿ ಗ್ರಾಮದ ನರೇಂದ್ರ ಎಂಬ ಯುವಕ ತಮ್ಮ ಗ್ರಾಮಕ್ಕೆ ಸಮರ್ಪಕ ರಸ್ತೆ ಇಲ್ಲ, ಬಸ್ ಸೌಕರ್ಯವಿಲ್ಲ, ಯಾರೊಬ್ಬ ಮುಖಂಡನೂ ಗ್ರಾಮಕ್ಕೆ ಸೌಕರ್ಯ ಕಲ್ಪಿಸಲು ಗಮನಹರಿಸುತ್ತಿಲ್ಲ ಎಂದು ಬಗರ್ ಹುಕುಂ ಸಭೆ ಮುಗಿಸಿಕೊಂಡು ಹೊರ ಬರುತ್ತಿದ್ದ ಶಾಸಕ ವೆಂಕಟರಮಣಪ್ಪರನ್ನು ಪ್ರಶ್ನಿಸಿದ್ದಾನೆ.

ಪ್ರಶ್ನಿಸುವ ಭರದಲ್ಲಿ ಕೆಟ್ಟ ಪದಗಳನ್ನು ಬಳಸಿದ್ದರಿಂದ ಕೋಪಗೊಂಡ ಶಾಸಕ ವೆಂಕಟರಮಣಪ್ಪ ಯುವಕನಿಗೆ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಸಾರ್ವಜನಿಕವಾಗಿ ಶಾಸಕರು ಸಂಯಮದಿಂದ ವರ್ತಿಸಬೇಕು, ಒಂದು ವೇಳೆ ಯುವಕ ತಪ್ಪು ಮಾಡಿದ್ದರೂ ಬುದ್ದಿ ಹೇಳಬೇಕಿತ್ತು. ಸಾರ್ವಜನಿಕವಾಗಿ ಹೊಡೆಯಬಾರದಿತ್ತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತದೆ.

ಘಟನೆ ಮಂಗಳವಾರ ನಡೆದಿದೆ. ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿದೆ.

Advertisement

ಇದನ್ನೂ ಓದಿ : ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next