Advertisement

ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾದ ಕಿರಿಯ ಇಂಜಿನಿಯರ್… ಕಾರಣ ನಿಗೂಢ

05:09 PM Jul 06, 2023 | Team Udayavani |

ಪಾವಗಡ: ಪಟ್ಟಣದ ಖಾಸಗಿ ವಸತಿ ನಿಲಯದ ಕೊಠಡಿಯಲ್ಲಿ ಬುಧವಾರ ರಾತ್ರಿ ಕಿರಿಯ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ವೈ ಎನ್ ಹೊಸಕೋಟೆಯ ಎಸ್ ಮಂಜುನಾಥ(22) ಮೃತರು. ಮಂಜುನಾಥ್ ಬೆಳ್ಳಂದೂರಿನ ಬೆಸ್ಕಾಂ ಪೂರ್ವ ವಿಭಾಗದಲ್ಲಿ ಸಹಾಯಕ ಕಿರಿಯ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಬುಧವಾರ ರಾತ್ರಿ ಪಟ್ಟಣದ ಖಾಸಗಿ ವಸತಿಗೃಹದಲ್ಲಿ ಕೊಠಡಿಯನ್ನು ಪಡೆದಿದ್ದರು. ಗುರುವಾರ ಬೆಳಿಗ್ಗೆ 8 ಗಂಟೆಯಾದರೂ ಕೊಠಡಿಯಿಂದ ಹೊರಬಾರದಿರುವುದರಿಂದ ಅನುಮಾನಗೊಂಡ ವಸತಿ ಗೃಹದ ಸಿಬ್ಬಂದಿ ಕಿಟಕಿಯಿಂದ ನೋಡಿದಾಗ ಫ್ಯಾನ್ ಗೆ ನೇಣು ಹಾಕಿಕೊಂಡಿರುವುದು ಕಂಡಿದೆ.

ಕೂಡಲೆ ಪಟ್ಟಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮದುವೆ ವಿಚಾರದಲ್ಲಿ ಬೇಸರಗೊಂಡು ತನ್ನ ತಮ್ಮ ಆತ್ಮಹತ್ಯೆ ಮಾಡಿ ಕೊಂಡಿರಬಹುದು ಎಂದು ಮೃತರ ಅಣ್ಣ ದೂರಿನಲ್ಲಿ ತಿಳಿಸಿದ್ದಾರೆ. ಪಾವಗಡ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Viral Video; ಜೈಂಟ್ ವೀಲ್ ನಲ್ಲಿ 3 ಗಂಟೆಗಳ ಕಾಲ ತಲೆಕೆಳಗಾಗಿ ಸಿಲುಕಿಕೊಂಡರು!

Advertisement
Advertisement

Udayavani is now on Telegram. Click here to join our channel and stay updated with the latest news.

Next