Advertisement

Road Mishap: ಬೈಕಿಗೆ ಬೊಲೆರೋ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು, ಇನ್ನೋರ್ವನಿಗೆ ಗಾಯ

11:29 AM Dec 18, 2023 | Team Udayavani |

ಪಾವಗಡ: ತಾಲೂಕಿನ ಆರ್ಲಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗ್ಗೆ ಬೈಕಿಗೆ ಬಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ನಡೆದಿದೆ.

Advertisement

ದೇವರಬೆಟ್ಟ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಪಟ್ಟಣದ ವೈ. ಇ.ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬೈಕ್ ನಲ್ಲಿ ಬರುವ ವೇಳೆ ಆರ್ಲಹಳ್ಳಿ ಗ್ರಾಮದ ಬಳಿ ಬೈಕಿಗೆ ಬಲೆರೊ ವಾಹನ ಡಿಕ್ಕಿ ಹೊಡೆದಿದೆ ಪರಿಣಾಮ ನವೀನ್ (21) ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ವಿದ್ಯಾರ್ಥಿ ಪ್ರಶಾಂತ್ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗಿದೆ.

ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: Sub Urban Rail Project: 40 ತಿಂಗಳಲ್ಲಿ 1 ಕಾರಿಡಾರ್‌ ನಿರ್ಮಾಣವೇ ಡೌಟು

Advertisement

Udayavani is now on Telegram. Click here to join our channel and stay updated with the latest news.

Next