Advertisement

High Court ಜಾಮೀನು ಅರ್ಜಿ ವಾಪಸ್‌ ಪಡೆದ ಪವಿತ್ರಾ ಗೌಡ; ಹೊಸ ಅರ್ಜಿ ಸಲ್ಲಿಕೆ?

11:57 PM Sep 13, 2024 | Team Udayavani |

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ತಮ್ಮ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಹಿಂಪಡೆದಿದ್ದಾರೆ.

Advertisement

ಪವಿತ್ರಾ ಗೌಡ ಜಾಮೀನು ಅರ್ಜಿ ಶುಕ್ರವಾರ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ಬಂದಿತ್ತು. ಈ ಸಂದರ್ಭದಲ್ಲಿ ಪವಿತ್ರಾ ಗೌಡ ಪರ ಹಿರಿಯ ವಕೀಲರಿಗೆ, ನೀವು ಅರ್ಜಿ ಸಲ್ಲಿಸಿದ ಮೇಲೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ ಎಂದು ವಿಶೇಷ ಸರಕಾರಿ ಅಭಿಯೋಜಕರು ಹೇಳುತ್ತಿದ್ದಾರೆ. ಏನ್‌ ಮಾಡ್ತೀರಿ, ಅರ್ಜಿ ಮುಂದುವರಿಸುತ್ತೀರಾ? ವಾಪಸ್‌ ಪಡೀತೀರಾ? ಈಗಾಗಲೇ ಒಬ್ಬ ಆರೋಪಿ ಅರ್ಜಿ ವಾಪಸ್‌ ಪಡೆದಿದ್ದಾರೆ. ಏನ್‌ ಮಾಡ್ತೀರಾ? ಎಂದು ಪ್ರಶ್ನೆ ಮಾಡಿದರು.

ಜತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಮುಂಚಿತವಾಗಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಾಗಿದೆ. ಈಗ ಚಾರ್ಜ್‌ಶೀಟ್‌ ಸಲ್ಲಿಕೆ ಆಗಿರುವ ಕಾರಣ ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ನ್ಯಾ| ವಿಶ್ವಜಿತ್‌ ಶೆಟ್ಟಿ ಅಭಿಪ್ರಾಯ ಪಟ್ಟರು. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಪರ ವಕೀಲರು ತಾವು ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದರು. ಸೆಷನ್ಸ್‌ ಕೋರ್ಟ್‌ ಜಾಮೀನು ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಪವಿತ್ರಾ ಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next