Advertisement

ದುಷ್ಕರ್ಮಿಗಳಿಂದ ಪಾವೂರು ದ್ವೀಪದ ಸೇತುವೆ ಧ್ವಂಸ:ಮರಳು ಮಾಫಿಯಾ ಕೈವಾಡ?

07:26 AM Feb 02, 2019 | Sharanya Alva |

ಮಂಗಳೂರು: ದ್ವೀಪದ ಗ್ರಾಮಸ್ಥರೇ ಹಣ ಖರ್ಚು ಮಾಡಿ ನಿರ್ಮಿಸಿಕೊಂಡಿದ್ದ ತಾತ್ಕಾಲಿಕ ಸೇತುವೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಪಾವೂರಿನ ಅಡ್ಯಾರಿನ ಸಮೀಪ ನಡೆದಿದೆ.

Advertisement

ಕಳೆದ ಹಲವಾರು ವರ್ಷಗಳಿಂದ ಸೇತುವೆ ನಿರ್ಮಿಸಿಕೊಡುವಂತೆ ಬೇಡಿಕೆ ಇಟ್ಟಿದ್ದರೂ ಕೂಡಾ ರಾಜಕಾರಣಿಗಳು ಅದಕ್ಕೆ ನಿರಾಸಕ್ತಿ ತೋರಿದ್ದರು. ಇದರಿಂದ ಉಳಿಯ ಗ್ರಾಮಸ್ಥರೇ ತಮ್ಮ ಸ್ವಂತ ಹಣದಿಂದ ಸೇತುವೆಯನ್ನು ನಿರ್ಮಿಸಿದ್ದರು. ಇದೀಗ ಏಕಾಏಕಿ ಸೇತುವೆಯನ್ನು ಶನಿವಾರ ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಈ ದುಷ್ಕೃತ್ಯದ ಹಿಂದೆ ಮರಳು ಮಾಫಿಯಾದ ಕೈವಾಡ ಇರಬೇಕೆಂದು ಸ್ಥಳೀಯರು ಶಂಕಿಸಿದ್ದಾರೆ. ಈ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಯುವುದನ್ನು ತಡೆದಿರುವುದೇ ಸೇತುವೆ ಧ್ವಂಸಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next