Advertisement

ಕಬ್ಬಿಗೆ ಸರ್ಕಾರ ನಿಗದಿ ಮಾಡಿದ ದರ ಕೊಡಿ

04:41 PM Sep 11, 2022 | Shwetha M |

ಆಲಮಟ್ಟಿ: ಬಾಗಲಕೋಟೆ ಜಿಲ್ಲೆಯ ನಾಗರಾಳ-ನಾಯನೇಗಲಿಯಲ್ಲಿರುವ ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಇನ್ನುಳಿದ ಸಕ್ಕರೆ ಕಾರ್ಖಾನೆಗಳಿಗಿಂತಲೂ ಕಡಿಮೆ ದರ ನೀಡುತ್ತಿರುವುದು ಸರಿಯಲ್ಲ. ಇನ್ನುಳಿದ ಸಕ್ಕರೆ ಕಾರ್ಖಾನೆಯಂತೆ ರೈತರು ಕಳುಹಿಸಿದ ಕಬ್ಬಿಗೆ ದರವನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನಿಡಗುಂದಿ ತಾಲೂಕು ಘಟಕದ ವತಿಯಿಂದ ಒತ್ತಾಯಿಸಲಾಯಿತು.

Advertisement

ಈ ಕುರಿತು ಶನಿವಾರ ರಾಷ್ಟ್ರೀಯ ಹೆದ್ದಾರಿ-50 ಚತುಷ್ಪಥ ರಸ್ತೆಗೆ ಹೊಂದಿಕೊಂಡಿರುವ ಬಾಗಲಕೋಟೆ ತಾಲೂಕಿನ ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆಗೆ ತೆರಳಿದ ಸಂಘದ ಪದಾಧಿಕಾರಿಗಳು ಮತ್ತು ರೈತರು ಆಡಳಿತ ಮಂಡಳಿಗೆ ಮನವಿ ಮಾಡಿದ ಅವರು, ವಿಜಯಪುರ ಜಿಲ್ಲೆಯ ಕಾರಜೋಳದಲ್ಲಿರುವ ಬಸವೇಶ್ವರ ಸಕ್ಕರೆ ಕಾರ್ಖಾನೆ ಮತ್ತು ಬೀಳಗಿ ತಾಲೂಕಿನ ಬಾಡಗಂಡಿ ಸಕ್ಕರೆ ಕಾರ್ಖಾನೆಯವರು ಕಳೆದ ವರ್ಷದಿಂದ ಒಂದು ಟನ್‌ ಕಬ್ಬಿಗೆ 2700 ರೂ. ಗಳನ್ನು ರೈತರ ಖಾತೆಗೆ ಮಾಡುತ್ತಿದ್ದಾರೆ. ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆಯವರು ಸರ್ಕಾರದ ನಿರ್ದೇಶನವನ್ನು ಗಾಳಿಗೆ ತೂರಿ 2456 ರೂ. ಮಾತ್ರ ರೈತರ ಖಾತೆಗಳಿಗೆ ಜಮಾ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಆಡಳಿತಮಂಡಳಿಯವರು ಕೂಡಲೇ ಸರ್ಕಾರ ನಿಗದಿಪಡಿಸಿದ ದರದಂತೆ ರೈತರಿಗೆ ಹಣ ಜಮಾ ಮಾಡಬೇಕು. ಇಲ್ಲದಿದ್ದರೆ ಕಾರ್ಖಾನೆ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ, ಮುತ್ತು ದೇಸಾಯಿ, ಸಾಬಣ್ಣ ಅಂಗಡಿ, ರಾಜು ಯಲಿಗಾರ, ಸುಭಾಷ್‌ ಚೋಪಡೆ, ವೆಂಕಟೇಶ ವಡ್ಡರ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next