Advertisement

ರಾಜ್ಯದಲ್ಲೂ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸೇವಾ ಶುಲ್ಕ ರದ್ದು: ಯುಟಿ

05:19 PM Apr 25, 2017 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸೇವಾ ಶುಲ್ಕ ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಸಚಿವ ಯುಟಿ ಖಾದರ್ ಮಂಗಳವಾರ ತಿಳಿಸಿದ್ದಾರೆ.

Advertisement

ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೇವಾ ಶುಲ್ಕ ರದ್ದುಗೊಳಿಸುವ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ನಮ್ಮ ಕೈಸೇರಿದೆ ಎಂದರು.

ಈ ಹಿನ್ನೆಲೆಯಲ್ಲಿ ಮುಂದಿನ ವಾರ ಹೋಟೆಲ್, ರೆಸ್ಟೋರೆಂಟ್ ಮಾಲೀಕರ ಸಭೆ ನಡೆಸಲಿದ್ದೇವೆ. ಸಭೆಯ ಬಳಿಕ ರಾಜ್ಯದಲ್ಲಿಯೂ ಸೇವಾ ಶುಲ್ಕವನ್ನು ರದ್ದು ಮಾಡಲಾಗುವುದು ಎಂದು ತಿಳಿಸಿದರು.

ಒಂದು ವೇಳೆ ಆದೇಶ ಜಾರಿ ಬಳಿಕ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶುಲ್ಕ ವಸೂಲಿ ಮಾಡಿದರೆ ದಂಡ ವಿಧಿಸುತ್ತೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next