Advertisement

ರೈತರಿಂದ ಲಂಚ ಸ್ವೀಕರಿಸಿದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

09:20 AM Jan 23, 2020 | keerthan |

ಗದಗ: ಜಿಲ್ಲೆಯ ಬಡ್ನಿ ಗ್ರಾಮ ಪಂಚಾಯತ್‌ ನ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ರೈತರಿಂದ ಲಂಚ ಸ್ವೀಕರಿಸುತ್ತಿದ್ದಾಗ ಬುಧವಾರ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.

Advertisement

ಲಕ್ಷ್ಮೇಶ್ವರ ತಾಲೂಕಿನ ಬಡ್ನಿ ಗ್ರಾಮ ಪಂಚಾಯತ್‌ ನ ಗ್ರಾಮ ಲೆಕ್ಕಾಧಿಕಾರಿ ಫಿರೋಜ್ ಖಾನ್ ಗೋರಿಖಾನ್ ಎಂಬುವವರು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.

ರೈತ ರಾಮಪ್ಪ ಅಣ್ಣಿಗೇರಿ ಎನ್ನುವವರು ಜಮೀನಿನ ಪಹಣೆ ಬದಲಾವಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಲೇವಾರಿಗೆ ಫಿರೋಜ್ ಖಾನ್ 20 ಸಾವಿರ ರೂ. ನೀಡುವಂತೆ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ. ಅದರ ಮುಂಗಡವಾಗಿ ಬುಧವಾರ ಮಧ್ಯಾಹ್ನ 14 ಸಾವಿರ ರೂ. ಪಡೆಯುತ್ತಿದ್ದಾಗ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು, ನಗದು ಸಹಿತ ಗ್ರಾಮ ಲೆಕ್ಕಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಎಸಿಬಿ ಡಿವೈಎಸ್ಪಿ ವಾಸುದೇವರಾಂ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next